<p>ದಾವಣಗೆರೆ: ‘ಹುಟ್ಟಿದ ಮನುಷ್ಯ ಒಂದು ದಿನ ಸಾಯುತ್ತಾನೆ. ಹುಟ್ಟು–ಸಾವುಗಳ ನಡುವಿನ ಜೀವಿತಾವಧಿಯಲ್ಲಿ ಆತ ಮಾಡಿದ ಕೆಲಸಗಳೇ ಸಾವಿನ ನಂತರವೂ ಹೆಸರನ್ನು ಉಳಿಸುತ್ತವೆ. ಅದಕ್ಕೆ ಪುನೀತ್ ರಾಜ್ಕುಮಾರ್ ದೊಡ್ಡ ಉದಾಹರಣೆ’ ಎಂದು ಮೇಯರ್ ಎಸ್.ಟಿ. ವೀರೇಶ್ ಹೇಳಿದರು.</p>.<p>ನಗರದ ಚಿಕ್ಕಮ್ಮಣ್ಣಿ ದೇವರಾಜ ಅರಸು ಬಡಾವಣೆಯಲ್ಲಿ ಸಿದ್ಧರಾಮೇಶ್ವರ ಯುವಕ ಸಂಘ, ಸಿದ್ಧಿ ವಿನಾಯಕ ಯುವಕರ ಸಂಘ, ಮಾರಿಕಾಂಬ ಯುವಕ ಸಂಘದ ಆಶ್ರಯದಲ್ಲಿ ಅಪ್ಪು ಅಭಿಮಾನಿಗಳ ಬಳಗ ಆಯೋಜಿಸಿದ್ದ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಉಸಿರು ನಿಂತ ನಂತರವೂ ಹೆಸರು ಉಳಿಯುವ ರೀತಿಯಲ್ಲಿ ಸೇವೆ ಮಾಡಬೇಕು. ಪುನೀತ್ ರಾಜ್ಕುಮಾರ್ ಬಲಗೈಯಲ್ಲಿ ಕೊಟ್ಟಿರುವುದು ಎಡಗೈಗೆ ಗೊತ್ತಾಗಬಾರದು ಎಂದು ಸೇವೆ ಮಾಡಿ<br />ದ್ದರು. ಪುನೀತ್ ಎಲ್ಲರಿಗೂ ಆದರ್ಶವಾಗಬೇಕು’ ಎಂದು ತಿಳಿಸಿದರು.</p>.<p>ಸಮನ್ವಯ ಸಮಿತಿಯ ಮುಪ್ಪಣ್ಣ ಮಾತನಾಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡ<br />ರಾದ ಎಚ್. ತಿಮ್ಮಣ್ಣ, ವೀರೇಶ್, ಶ್ರೀನಿವಾಸ್, ಎಚ್.ನಾಗರಾಜ್, ಎಚ್.ಎನ್. ರಾಜಪ್ಪ, ಮಾನಸ ತಿಪ್ಪೆಸ್ವಾಮಿ, ಎಲ್ಐಸಿ ಹನುಮಂತಪ್ಪ, ಎಸ್.ವಿ.ಈಶ್ವರ್, ಮುತ್ತುರಾಜ, ಲೋಕೇಶಪ್ಪ, ನಾಗರಾಜ್, ಕೆ.ಪಿ. ನಿರಂಜನ್, ಆನಂದ್ ಇದ್ದರು. ಸ್ಥಳೀಯ ಉದ್ಯಾನಕ್ಕೆ ಪುನೀತ್ ರಾಜ್ಕುಮಾರ್ ಉದ್ಯಾನ ಎಂದು ನಾಮಕರಣ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಹುಟ್ಟಿದ ಮನುಷ್ಯ ಒಂದು ದಿನ ಸಾಯುತ್ತಾನೆ. ಹುಟ್ಟು–ಸಾವುಗಳ ನಡುವಿನ ಜೀವಿತಾವಧಿಯಲ್ಲಿ ಆತ ಮಾಡಿದ ಕೆಲಸಗಳೇ ಸಾವಿನ ನಂತರವೂ ಹೆಸರನ್ನು ಉಳಿಸುತ್ತವೆ. ಅದಕ್ಕೆ ಪುನೀತ್ ರಾಜ್ಕುಮಾರ್ ದೊಡ್ಡ ಉದಾಹರಣೆ’ ಎಂದು ಮೇಯರ್ ಎಸ್.ಟಿ. ವೀರೇಶ್ ಹೇಳಿದರು.</p>.<p>ನಗರದ ಚಿಕ್ಕಮ್ಮಣ್ಣಿ ದೇವರಾಜ ಅರಸು ಬಡಾವಣೆಯಲ್ಲಿ ಸಿದ್ಧರಾಮೇಶ್ವರ ಯುವಕ ಸಂಘ, ಸಿದ್ಧಿ ವಿನಾಯಕ ಯುವಕರ ಸಂಘ, ಮಾರಿಕಾಂಬ ಯುವಕ ಸಂಘದ ಆಶ್ರಯದಲ್ಲಿ ಅಪ್ಪು ಅಭಿಮಾನಿಗಳ ಬಳಗ ಆಯೋಜಿಸಿದ್ದ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಉಸಿರು ನಿಂತ ನಂತರವೂ ಹೆಸರು ಉಳಿಯುವ ರೀತಿಯಲ್ಲಿ ಸೇವೆ ಮಾಡಬೇಕು. ಪುನೀತ್ ರಾಜ್ಕುಮಾರ್ ಬಲಗೈಯಲ್ಲಿ ಕೊಟ್ಟಿರುವುದು ಎಡಗೈಗೆ ಗೊತ್ತಾಗಬಾರದು ಎಂದು ಸೇವೆ ಮಾಡಿ<br />ದ್ದರು. ಪುನೀತ್ ಎಲ್ಲರಿಗೂ ಆದರ್ಶವಾಗಬೇಕು’ ಎಂದು ತಿಳಿಸಿದರು.</p>.<p>ಸಮನ್ವಯ ಸಮಿತಿಯ ಮುಪ್ಪಣ್ಣ ಮಾತನಾಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡ<br />ರಾದ ಎಚ್. ತಿಮ್ಮಣ್ಣ, ವೀರೇಶ್, ಶ್ರೀನಿವಾಸ್, ಎಚ್.ನಾಗರಾಜ್, ಎಚ್.ಎನ್. ರಾಜಪ್ಪ, ಮಾನಸ ತಿಪ್ಪೆಸ್ವಾಮಿ, ಎಲ್ಐಸಿ ಹನುಮಂತಪ್ಪ, ಎಸ್.ವಿ.ಈಶ್ವರ್, ಮುತ್ತುರಾಜ, ಲೋಕೇಶಪ್ಪ, ನಾಗರಾಜ್, ಕೆ.ಪಿ. ನಿರಂಜನ್, ಆನಂದ್ ಇದ್ದರು. ಸ್ಥಳೀಯ ಉದ್ಯಾನಕ್ಕೆ ಪುನೀತ್ ರಾಜ್ಕುಮಾರ್ ಉದ್ಯಾನ ಎಂದು ನಾಮಕರಣ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>