ಕಾರ್ಯಕ್ರಮಕ್ಕೆ ಸುದೀಪ್ ಅವರನ್ನು ಆಹ್ವಾನಿಸಿದ್ದರಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಮಹರ್ಷಿ ವಾಲ್ಮೀಕಿ ಪೀಠದ ಸಭಾಂಗಣದೆದುರು ನೆರೆದಿದ್ದರು. ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆದ ವೇದಿಕೆ ಕಾರ್ಯಕ್ರಮದಲ್ಲೂ ಅಭಿಮಾನಿಗಳು ಸುದೀಪ್ ಪರ ಜೈಕಾರ ಕೂಗಿ ಕೇಕೆ ಹಾಕಿದ್ದರು. ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗಾಗ ಎಚ್ಚರಿಕೆ ನೀಡಿ ಅಭಿಮಾನಿಗಳನ್ನು ಸುಮ್ಮನಾಗಿಸುತ್ತಿದ್ದರು.