<p><strong>ಹರಿಹರ: </strong>ಜ್ಞಾನ ಜಗತ್ತನ್ನೇ ಆಳುತ್ತದೆ. ಜ್ಞಾನದ ಸಂಪಾದನೆಗೆ ಈ ರೀತಿಯ ಅಧ್ಯಯನ ಶಿಬಿರಗಳು ಸಹಕಾರಿಯಾಗಬಲ್ಲವು ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ತಿಳಿಸಿದರು.</p>.<p>ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಸಮೀಪದ ಪ್ರೋ.ಬಿ. ಕೃಷ್ಣಪ್ಪ ಸಾಂಸ್ಕೃತಿಕ ಭವನದಲ್ಲಿ ಡಿಎಸ್-4 ಸಮಿತಿ ವತಿಯಿಂದ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮಾಜ ಬದಲಾಗಬೇಕು ಎಂದಾದಲ್ಲಿ ಜ್ಞಾನದ ಅಗತ್ಯವಿದೆ. ಪ್ರತಿಯೊಬ್ಬರು ಅದನ್ನು ಸಂಪಾದಿಸಿದಾಗ ಸಮಾಜ ತನ್ನಿಂದ ತಾನೇ ಬದಲಾಗುತ್ತದೆ. ಅನ್ಯಾಯಕ್ಕೆ ಒಳಗಾಗಿರುವ ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದೇಶದ ಪ್ರಸ್ತುತ ವಿದ್ಯಮಾನಗಳ ಜತೆಗೆ ನ್ಯಾಯ-ಅನ್ಯಾಯಗಳ ಜ್ಞಾನ ತುಂಬುವ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಹೇಳಿದರು.</p>.<p>ದೇಶಕ್ಕೆ ಅಂಬೇಡ್ಕರ್ ನೀಡಿದ ತತ್ವ ಸಿದ್ಧಾಂತಗಳಿಂದ ನಾವು ಸದೃಢ ಹಾಗೂ ಸಮೃದ್ಧ ಭಾರತವನ್ನು ನಿರ್ಮಾಣ ಮಾಡಬಹುದು. ಸಂವಿಧಾನದಲ್ಲಿ ಸರ್ವರಿಗೂ ಅವಕಾಶವಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದಲ್ಲಿ ಅಂಬೇಡ್ಕರ್ ಕಂಡ ಕನಸಿನ ಭಾರತ ನಿರ್ಮಾಣ ಮಾಡಬಹುದು ಎಂದು ಕರೆ ನೀಡಿದರು.</p>.<p>ಡಾ.ಎಚ್. ವಿಶ್ವನಾಥ, ‘ದೇಶ ಶಾಂತಿಯುತವಾಗಿರಲು ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣ. ಅವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಹೋರಾಡಿದವರಲ್ಲ. ಸಮಾನತೆಗೆ ಹೋರಾಟ ಮಾಡಿದವರು. ಅವರ ತತ್ವ ಸಿದ್ಧಾಂತಗಳನ್ನು ಅನಿಷ್ಠಾನಕ್ಕೆ ಯತ್ನಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ’ ಎಂದರು.</p>.<p>ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಹೆಗ್ಗೆರೆ ರಂಗಪ್ಪ, ಸಮಿತಿಯ ಪದಾಧಿಕಾರಿಗಳಾದ ಎಂ. ಸಂತೋಷ್, ಕೆ.ಸಿ. ಮೂರ್ತಿ, ಟಿ. ಬಸವರಾಜ್, ಕೃಷ್ಣಪ್ಪ, ಬಾಬುರಾವ್, ಸಿಪಿಐ ಗುರುನಾಥ, ಪಿಎಸ್ಐಗಳಾದ ಸಿದ್ದೇಗೌಡ, ಮೇಘರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ: </strong>ಜ್ಞಾನ ಜಗತ್ತನ್ನೇ ಆಳುತ್ತದೆ. ಜ್ಞಾನದ ಸಂಪಾದನೆಗೆ ಈ ರೀತಿಯ ಅಧ್ಯಯನ ಶಿಬಿರಗಳು ಸಹಕಾರಿಯಾಗಬಲ್ಲವು ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ತಿಳಿಸಿದರು.</p>.<p>ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಸಮೀಪದ ಪ್ರೋ.ಬಿ. ಕೃಷ್ಣಪ್ಪ ಸಾಂಸ್ಕೃತಿಕ ಭವನದಲ್ಲಿ ಡಿಎಸ್-4 ಸಮಿತಿ ವತಿಯಿಂದ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಮಾಜ ಬದಲಾಗಬೇಕು ಎಂದಾದಲ್ಲಿ ಜ್ಞಾನದ ಅಗತ್ಯವಿದೆ. ಪ್ರತಿಯೊಬ್ಬರು ಅದನ್ನು ಸಂಪಾದಿಸಿದಾಗ ಸಮಾಜ ತನ್ನಿಂದ ತಾನೇ ಬದಲಾಗುತ್ತದೆ. ಅನ್ಯಾಯಕ್ಕೆ ಒಳಗಾಗಿರುವ ದಲಿತರಿಗೆ ನ್ಯಾಯ ಸಿಗಬೇಕು ಎಂದರೆ ದೇಶದ ಪ್ರಸ್ತುತ ವಿದ್ಯಮಾನಗಳ ಜತೆಗೆ ನ್ಯಾಯ-ಅನ್ಯಾಯಗಳ ಜ್ಞಾನ ತುಂಬುವ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಹೇಳಿದರು.</p>.<p>ದೇಶಕ್ಕೆ ಅಂಬೇಡ್ಕರ್ ನೀಡಿದ ತತ್ವ ಸಿದ್ಧಾಂತಗಳಿಂದ ನಾವು ಸದೃಢ ಹಾಗೂ ಸಮೃದ್ಧ ಭಾರತವನ್ನು ನಿರ್ಮಾಣ ಮಾಡಬಹುದು. ಸಂವಿಧಾನದಲ್ಲಿ ಸರ್ವರಿಗೂ ಅವಕಾಶವಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದಲ್ಲಿ ಅಂಬೇಡ್ಕರ್ ಕಂಡ ಕನಸಿನ ಭಾರತ ನಿರ್ಮಾಣ ಮಾಡಬಹುದು ಎಂದು ಕರೆ ನೀಡಿದರು.</p>.<p>ಡಾ.ಎಚ್. ವಿಶ್ವನಾಥ, ‘ದೇಶ ಶಾಂತಿಯುತವಾಗಿರಲು ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣ. ಅವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಹೋರಾಡಿದವರಲ್ಲ. ಸಮಾನತೆಗೆ ಹೋರಾಟ ಮಾಡಿದವರು. ಅವರ ತತ್ವ ಸಿದ್ಧಾಂತಗಳನ್ನು ಅನಿಷ್ಠಾನಕ್ಕೆ ಯತ್ನಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ’ ಎಂದರು.</p>.<p>ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಹೆಗ್ಗೆರೆ ರಂಗಪ್ಪ, ಸಮಿತಿಯ ಪದಾಧಿಕಾರಿಗಳಾದ ಎಂ. ಸಂತೋಷ್, ಕೆ.ಸಿ. ಮೂರ್ತಿ, ಟಿ. ಬಸವರಾಜ್, ಕೃಷ್ಣಪ್ಪ, ಬಾಬುರಾವ್, ಸಿಪಿಐ ಗುರುನಾಥ, ಪಿಎಸ್ಐಗಳಾದ ಸಿದ್ದೇಗೌಡ, ಮೇಘರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>