<p><strong>ದಾವಣಗೆರೆ:</strong> ‘ರಾಜ್ಯ ಸರ್ಕಾರ ₹10 ಸಾವಿರ ಕೋಟಿ ಮೊತ್ತದ ಆವರ್ತ ನಿಧಿ ಹಾಗೂ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಮೊತ್ತದ ಆವರ್ತ ನಿಧಿ ಸ್ಥಾಪಿಸಬೇಕು. ಇದನ್ನು ಬೆಂಬಲ ಬೆಲೆ ಯೋಜನೆ (ಎಂಎಸ್ಪಿ) ಜಾರಿಗೆ ಬಳಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. </p><p>‘ಈಗಾಗಲೇ ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡಿರುವ ರೈತರಿಗೂ ಮಾರುಕಟ್ಟೆ ಮಧ್ಯಪ್ರವೇಶ ದರ (ಎಂಐಪಿ) ಯೋಜನೆಯಡಿ ಆರ್ಥಿಕ ನೆರವು ನೀಡಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p><p>‘ದೇಶದ ಆರ್ಥಿಕತೆ ಸದೃಢವಾಗಿರುವುದಾಗಿ ಸುಳ್ಳು ಹಬ್ಬಿಸಲಾಗುತ್ತಿದೆ. ರೂಪಾಯಿ ಮೌಲ್ಯ ತೀವ್ರ ಕುಸಿದಿದೆ. ಆದರೆ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಆರ್ಥಿಕ ತಜ್ಞರು ಜನರಿಗೆ ವಾಸ್ತವ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸುತ್ತಿಲ್ಲ. ಜಿಡಿಪಿ ಬೆಳವಣಿಗೆ ಹೆಚ್ಚಾಗಿರುವುದಾಗಿ ನಂಬಿಸಲಾಗುತ್ತಿದೆ’ ಎಂದು ದೂರಿದರು. </p><p>‘ಕೆಲವೇ ಉದ್ಯಮಿಗಳ ಶ್ರೀಮಂತಿಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಸಾಲವನ್ನು ರೈಟ್ಆಫ್ ಮಾಡಿದೆ. ಆದರೆ, ಜನರ ತೆರಿಗೆ ಹಣದಲ್ಲಿ ₹200 ಲಕ್ಷ ಕೋಟಿ ಸಾಲಕ್ಕೆ ಬಡ್ಡಿ ಕಟ್ಟುತ್ತಿದೆ’ ಎಂದು ಹೇಳಿದರು. </p><p>ರೈತ ಮುಖಂಡರಾದ ಚಂದ್ರಶೇ ಖರ ಜಮಖಂಡಿ, ಮಹದೇವಿ ಬೇವಿನಾಳಮಠ, ಅರುಣಕುಮಾರ್, ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ವಿಶ್ವನಾಥ್ ಹಾಗೂ ಇನ್ನಿತರರಿದ್ದರು. </p>.<div><blockquote>ನವ ಕರ್ನಾಟಕ ನಿರ್ಮಾಣ ಆಂದೋಲನ ಹೋರಾಟ ವೇದಿಕೆಯಡಿ ಪರ್ಯಾಯ ರಾಜಕಾರಣಕ್ಕೆ ಮುಂದಾಗುತ್ತಿದ್ದೇವೆ. ದಲಿತ, ಕನ್ನಡಪರ, ಕಾರ್ಮಿಕ ಪರ ಸಂಘಟನೆಗಳ ಬೆಂಬಲದೊಂದಿಗೆ ಪ್ರಾದೇಶಿಕ ಪಕ್ಷ ಆರಂಭಿಸುತ್ತೇವೆ</blockquote><span class="attribution"> ಕೋಡಿಹಳ್ಳಿ ಚಂದ್ರಶೇಖರ್,ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ರಾಜ್ಯ ಸರ್ಕಾರ ₹10 ಸಾವಿರ ಕೋಟಿ ಮೊತ್ತದ ಆವರ್ತ ನಿಧಿ ಹಾಗೂ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಮೊತ್ತದ ಆವರ್ತ ನಿಧಿ ಸ್ಥಾಪಿಸಬೇಕು. ಇದನ್ನು ಬೆಂಬಲ ಬೆಲೆ ಯೋಜನೆ (ಎಂಎಸ್ಪಿ) ಜಾರಿಗೆ ಬಳಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. </p><p>‘ಈಗಾಗಲೇ ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡಿರುವ ರೈತರಿಗೂ ಮಾರುಕಟ್ಟೆ ಮಧ್ಯಪ್ರವೇಶ ದರ (ಎಂಐಪಿ) ಯೋಜನೆಯಡಿ ಆರ್ಥಿಕ ನೆರವು ನೀಡಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. </p><p>‘ದೇಶದ ಆರ್ಥಿಕತೆ ಸದೃಢವಾಗಿರುವುದಾಗಿ ಸುಳ್ಳು ಹಬ್ಬಿಸಲಾಗುತ್ತಿದೆ. ರೂಪಾಯಿ ಮೌಲ್ಯ ತೀವ್ರ ಕುಸಿದಿದೆ. ಆದರೆ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಆರ್ಥಿಕ ತಜ್ಞರು ಜನರಿಗೆ ವಾಸ್ತವ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸುತ್ತಿಲ್ಲ. ಜಿಡಿಪಿ ಬೆಳವಣಿಗೆ ಹೆಚ್ಚಾಗಿರುವುದಾಗಿ ನಂಬಿಸಲಾಗುತ್ತಿದೆ’ ಎಂದು ದೂರಿದರು. </p><p>‘ಕೆಲವೇ ಉದ್ಯಮಿಗಳ ಶ್ರೀಮಂತಿಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಸಾಲವನ್ನು ರೈಟ್ಆಫ್ ಮಾಡಿದೆ. ಆದರೆ, ಜನರ ತೆರಿಗೆ ಹಣದಲ್ಲಿ ₹200 ಲಕ್ಷ ಕೋಟಿ ಸಾಲಕ್ಕೆ ಬಡ್ಡಿ ಕಟ್ಟುತ್ತಿದೆ’ ಎಂದು ಹೇಳಿದರು. </p><p>ರೈತ ಮುಖಂಡರಾದ ಚಂದ್ರಶೇ ಖರ ಜಮಖಂಡಿ, ಮಹದೇವಿ ಬೇವಿನಾಳಮಠ, ಅರುಣಕುಮಾರ್, ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ವಿಶ್ವನಾಥ್ ಹಾಗೂ ಇನ್ನಿತರರಿದ್ದರು. </p>.<div><blockquote>ನವ ಕರ್ನಾಟಕ ನಿರ್ಮಾಣ ಆಂದೋಲನ ಹೋರಾಟ ವೇದಿಕೆಯಡಿ ಪರ್ಯಾಯ ರಾಜಕಾರಣಕ್ಕೆ ಮುಂದಾಗುತ್ತಿದ್ದೇವೆ. ದಲಿತ, ಕನ್ನಡಪರ, ಕಾರ್ಮಿಕ ಪರ ಸಂಘಟನೆಗಳ ಬೆಂಬಲದೊಂದಿಗೆ ಪ್ರಾದೇಶಿಕ ಪಕ್ಷ ಆರಂಭಿಸುತ್ತೇವೆ</blockquote><span class="attribution"> ಕೋಡಿಹಳ್ಳಿ ಚಂದ್ರಶೇಖರ್,ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>