<p><strong>ದಾವಣಗೆರೆ:</strong> ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ದಾವಣಗೆರೆ ‘ಸಿ’ ವರ್ಗದಿಂದ ಆಯ್ಕೆಯಾಗಿದ್ದ ಕೋಗುಂಡಿ ಬಕ್ಕೇಶಪ್ಪ ಹಾಗೂ ಉಪಾಧ್ಯಕ್ಷರಾಗಿ ಹರಿಹರ ‘ಎ’ವರ್ಗ ಡಿ.ಕುಮಾರ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಜ್ಮಾ ಅವರು ಅಭ್ಯರ್ಥಿಯನ್ನು ಘೋಷಿಸಿದರು. 15 ನಿರ್ದೇಶಕರ ಪೈಕಿ 2 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. 13 ಸ್ಥಾನಗಳಿಗೆ ಈಚೆಗೆ ನಡೆದ ಚುನಾವಣೆಯಲ್ಲಿ 10 ಜನರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಹೆಚ್ಚು ಸ್ಥಾನ ಗಳಿಸಿರುವ ಕಾಂಗ್ರೆಸ್ ಡಿಸಿಸಿ ಬ್ಯಾಂಕ್ನಲ್ಲಿ ಅಧಿಕಾರದ ಗದ್ದುಗೆ ಏರಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇತ್ತು.</p>.<p>‘ರೈತರಿಗೆ ಮಧ್ಯವರ್ತಿಗಳ ಕಾಟ ತಪ್ಪಿಸಿ ನೇರವಾಗಿ ಸಾಲ ಸಿಗುವಂತೆ ಮಾಡುವುದು. ಬ್ಯಾಂಕ್ ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು. ಬ್ಯಾಂಕ್ನಲ್ಲಿ ಬಿಗಿಯಾದ ಆಡಳಿತ ನಡೆಸಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರ ಗುರಿಯಾಗಿದ್ದು, ಅದನ್ನು ಈಡೇರಿಸಲು ಪ್ರಯತ್ನ ನಡೆಸಲಾಗುವುದು’ ಎಂದು ಕೋಗುಂಡೆ ಬಕ್ಕೇಶಪ್ಪ ತಿಳಿಸಿದರು.</p>.<p>‘ಕೋಗುಂಡೆ ಬಕ್ಕೇಶಪ್ಪ ಅವರು 35 ವರ್ಷಗಳಿಂದ ದಾವಣಗೆರೆ ಅರ್ಬನ್ ಕೊ ಆಪರೇಟಿವ್ ಬ್ಯಾಂಕ್ನ ನಿರ್ದೇಶಕರಾಗಿದ್ದರು. 10 ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು.</p>.<p>ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅಂತಿಮಗೊಳಿಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ದಾವಣಗೆರೆ ‘ಸಿ’ ವರ್ಗದಿಂದ ಆಯ್ಕೆಯಾಗಿದ್ದ ಕೋಗುಂಡಿ ಬಕ್ಕೇಶಪ್ಪ ಹಾಗೂ ಉಪಾಧ್ಯಕ್ಷರಾಗಿ ಹರಿಹರ ‘ಎ’ವರ್ಗ ಡಿ.ಕುಮಾರ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನಜ್ಮಾ ಅವರು ಅಭ್ಯರ್ಥಿಯನ್ನು ಘೋಷಿಸಿದರು. 15 ನಿರ್ದೇಶಕರ ಪೈಕಿ 2 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. 13 ಸ್ಥಾನಗಳಿಗೆ ಈಚೆಗೆ ನಡೆದ ಚುನಾವಣೆಯಲ್ಲಿ 10 ಜನರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ ಮೂವರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಹೆಚ್ಚು ಸ್ಥಾನ ಗಳಿಸಿರುವ ಕಾಂಗ್ರೆಸ್ ಡಿಸಿಸಿ ಬ್ಯಾಂಕ್ನಲ್ಲಿ ಅಧಿಕಾರದ ಗದ್ದುಗೆ ಏರಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇತ್ತು.</p>.<p>‘ರೈತರಿಗೆ ಮಧ್ಯವರ್ತಿಗಳ ಕಾಟ ತಪ್ಪಿಸಿ ನೇರವಾಗಿ ಸಾಲ ಸಿಗುವಂತೆ ಮಾಡುವುದು. ಬ್ಯಾಂಕ್ ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು. ಬ್ಯಾಂಕ್ನಲ್ಲಿ ಬಿಗಿಯಾದ ಆಡಳಿತ ನಡೆಸಬೇಕು ಎಂಬುದು ಜಿಲ್ಲಾ ಉಸ್ತುವಾರಿ ಸಚಿವರ ಗುರಿಯಾಗಿದ್ದು, ಅದನ್ನು ಈಡೇರಿಸಲು ಪ್ರಯತ್ನ ನಡೆಸಲಾಗುವುದು’ ಎಂದು ಕೋಗುಂಡೆ ಬಕ್ಕೇಶಪ್ಪ ತಿಳಿಸಿದರು.</p>.<p>‘ಕೋಗುಂಡೆ ಬಕ್ಕೇಶಪ್ಪ ಅವರು 35 ವರ್ಷಗಳಿಂದ ದಾವಣಗೆರೆ ಅರ್ಬನ್ ಕೊ ಆಪರೇಟಿವ್ ಬ್ಯಾಂಕ್ನ ನಿರ್ದೇಶಕರಾಗಿದ್ದರು. 10 ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು.</p>.<p>ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹೆಸರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅಂತಿಮಗೊಳಿಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>