ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಕ್ಕನೂರಿನ ಆಂಜನೇಯ ಸ್ವಾಮಿ ಸಂಭ್ರಮದ ಕಾರ್ತಿಕೋತ್ಸವ

Last Updated 28 ಡಿಸೆಂಬರ್ 2021, 5:25 IST
ಅಕ್ಷರ ಗಾತ್ರ

ಕೊಕ್ಕನೂರು (ಮಲೇಬೆನ್ನೂರು):ಸಮೀಪದ ಕೊಕ್ಕನೂರಿನ ಆಂಜನೇಯ ಸ್ವಾಮಿ ‘ಕಾರ್ತೀಕೋತ್ಸವ ಹಾಗೂ ಅಶ್ವೋತ್ಸವ’ ಶನಿವಾರ ವೈಭವದಿಂದ ಜರುಗಿತು.

ಗ್ರಾಮದ ಮುಖ್ಯಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಉತ್ಸವ ಮೂರ್ತಿಯ ಗ್ರಾಮದರ್ಶನದ ಮೆರವಣಿಗೆ ಜರುಗಿತು. ದೇವಾಲಯದ ಆವರಣದಲ್ಲಿ ಎಣ್ಣೆ ದೀಪ ಬೆಳಗಿಸಿ ಭಕ್ತರು ಭಕ್ತಿ ಸಮರ್ಪಿಸಿದರು.

ದೇವಾಲಯ ಹಾಗೂ ರಾಜಬೀದಿಯನ್ನು ವಿದ್ಯುತ್ ದೀಪಗಳಿಂದ, ಮೂಲ ಆಂಜನೇಯ ವಿಗ್ರಹಕ್ಕೆ ಹೂವುಗಳಿಂದ ಅಲಂಕರಿದ್ದರು.

ಜಾತ್ರೆಯಲ್ಲಿ ಆಟಿಕೆ ಸಾಮಾನು, ಬೆಂಡು ಬತ್ತಾಸು ಅಂಗಡಿ ಇದ್ದವು. ವಿವಿಧ ಭಾಗಗಳ ಭಕ್ತರು ಭಾಗವಹಿಸಿದ್ದರು. ಪೊಲೀಸರು ಭದ್ರತೆ ಒದಗಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT