‘ಪಂಚಮಸಾಲಿ ಸಮಾಜಕ್ಕೆ ಮಂತ್ರಿಗಿರಿಗಿಂತಲೂ ಮೀಸಲಾತಿ ಬೇಕು. ನಮ್ಮ ಸಮಾಜದ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿ 17 ಜನರು ಇದ್ದಾರೆ. ಅದಕ್ಕೆ ಅನುಗುಣವಾಗಿ ಮಂತ್ರಿ ಸ್ಥಾನ ಕೊಟ್ಟಿಲ್ಲ. ನಮಗೂ ಕೇಳಿ ಕೇಳಿ ಬೇಸರವಾಗಿದೆ. ಹೀಗಾಗಿ ಮಂತ್ರಿಗಿರಿಯನ್ನು ಕೇಳುವುದೇ ಇಲ್ಲ ಎಂದು ಮುಖ್ಯಮಂತ್ರಿಗೆ ಹೇಳಿದ್ದೇವೆ’ ಎಂದು ತಿಳಿಸಿದರು.