<p><strong>ದಾವಣಗೆರೆ:</strong> ತಾಂತ್ರಿಕ ಕಾರಣಗಳಿಂದಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಲ್ಯಾಬ್ ಆರಂಭಿಸುವ ಪ್ರಕ್ರಿಯೆ ಮುಂದಕ್ಕೆ ಹೋಗಿದೆ. ಮೇ 3 ಅಥವಾ 4ಕ್ಕೆ ಲ್ಯಾಬ್ ಉದ್ಘಾಟನೆಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಆ ಲ್ಯಾಬ್ಗಾಗಿ ಈಗಾಗಲೇ ₹ 90 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಏಪ್ರಿಲ್ 30ರ ಒಳಗೆ ಎಸ್.ಎಸ್. ವೈದ್ಯಕೀಯ ಕಾಲೇಜಿನಲ್ಲಿ ಲಾಬ್ ಆರಂಭಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜಗಳೂರು ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದಾಗ ನೀರಿನ ಸಮಸ್ಯೆ ಗಮನಕ್ಕೆ ಬಂದಿದೆ. ಈ ಸಮಸ್ಯೆ ಪರಿಹರಿಸಲು ಹೆಚ್ಚು ಒತ್ತು ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಸೂಚನೆ ನೀಡಿದ್ದೇನೆ’ ಎಂದರು.</p>.<p>ಕಲ್ಲೆದೇವಪುರ, ದೊಣ್ಣೆಹಳ್ಳಿ, ದೇವಿಕೆರೆ, ಬಿಳಿಚೋಡುಗಳಲ್ಲಿ ಬಡವರಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಹರಿಹರದಲ್ಲಿ ಎರಡು ಕಡೆ ಅನ್ನದಾಸೋಹಕ್ಕೆ ಚಾಲನೆ ನೀಡಲಾಯಿತು. ಆನಗೋಡಿನಲ್ಲಿ ಕಿಟ್ ವಿತರಣೆ ಮಾಡಲಾಗುವುದು ಎಂದು ವಿವರಿಸಿದರು.</p>.<p>ಹರಿಹರದಲ್ಲಿ ಬಿತ್ತನೆ ಬೀಜ, ಗೊಬ್ಬರದ ಬಗ್ಗೆ ಪರಿಶೀಲನೆ ನಡೆಸಲಾಯಿತು. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ₹ 1.10 ಕೋಟಿ ವೆಚ್ಚದಲ್ಲಿ 26 ಸಾವಿರ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆಗೆ ಸಿದ್ಧತೆ ಮಾಡಲಾಗಿದೆ. ಪಡಿತರ ಚೀಟಿ ಇಲ್ಲದ 8,000 ಮಂದಿಯನ್ನು ಗುರುತಿಸಲಾಗಿದೆ. ಅವರಿಗೆ ಪಡಿತರ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಲೋಕಸಭಾ ಕ್ಷೇತ್ರದಲ್ಲಿ 83 ಸಾವಿರ ನೋಂದಾಯಿತ ಕಾರ್ಮಿಕರಿದ್ದಾರೆ. ಅದರಲ್ಲಿ ಸುಮಾರು 71 ಸಾವಿರ ಮಂದಿಗೆ ತಲಾ ₹ 2 ಸಾವಿರದಂತೆ ₹ 14.2 ಕೋಟಿ ಜಮಾ ಮಾಡಲಾಗಿದೆ. ಉಳಿದ 12 ಸಾವಿರ ಮಂದಿಯ ಬ್ಯಾಂಕ್ ವಿವರ ಸಂಗ್ರಹಿಸಲಾಗಿದೆ. ಅವರ ಖಾತೆಗೂ ಶೀಘ್ರದಲ್ಲಿ ₹ 2 ಸಾವಿರ ಜಮಾ ಆಗಲಿದೆ ಎಂದು ತಿಳಿಸಿದರು.</p>.<p>ಮುಂದಿನ ಸೋಮವಾರದಲ್ಲಿ ಮಾಯಕೊಂಡ, ದಾವಣಗೆರೆ ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು.</p>.<p>ಪಿಪಿಇ ಕಿಟ್ ಎಷ್ಟು ಅಗತ್ಯ ಇದೆಯೋ ಅದನ್ನು ಪೂರೈಸಲು ಸರ್ಕಾರ ತಯಾರಿದೆ. ಆದನ್ನು ಆಸ್ಪತ್ರೆಯಲ್ಲಿ ಕೆಲಸ ಮಾಡುವ ಎಲ್ಲರೂ ಬಳಸುವುದಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಾರ ಯಾರಿಗೆ ನೀಡಬೇಕೋ ಅವರಿಗಷ್ಟೇ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ.ಎನ್. ಲಿಂಗಣ್ಣ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ತಾಂತ್ರಿಕ ಕಾರಣಗಳಿಂದಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಲ್ಯಾಬ್ ಆರಂಭಿಸುವ ಪ್ರಕ್ರಿಯೆ ಮುಂದಕ್ಕೆ ಹೋಗಿದೆ. ಮೇ 3 ಅಥವಾ 4ಕ್ಕೆ ಲ್ಯಾಬ್ ಉದ್ಘಾಟನೆಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಆ ಲ್ಯಾಬ್ಗಾಗಿ ಈಗಾಗಲೇ ₹ 90 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಏಪ್ರಿಲ್ 30ರ ಒಳಗೆ ಎಸ್.ಎಸ್. ವೈದ್ಯಕೀಯ ಕಾಲೇಜಿನಲ್ಲಿ ಲಾಬ್ ಆರಂಭಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜಗಳೂರು ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದಾಗ ನೀರಿನ ಸಮಸ್ಯೆ ಗಮನಕ್ಕೆ ಬಂದಿದೆ. ಈ ಸಮಸ್ಯೆ ಪರಿಹರಿಸಲು ಹೆಚ್ಚು ಒತ್ತು ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಸೂಚನೆ ನೀಡಿದ್ದೇನೆ’ ಎಂದರು.</p>.<p>ಕಲ್ಲೆದೇವಪುರ, ದೊಣ್ಣೆಹಳ್ಳಿ, ದೇವಿಕೆರೆ, ಬಿಳಿಚೋಡುಗಳಲ್ಲಿ ಬಡವರಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಹರಿಹರದಲ್ಲಿ ಎರಡು ಕಡೆ ಅನ್ನದಾಸೋಹಕ್ಕೆ ಚಾಲನೆ ನೀಡಲಾಯಿತು. ಆನಗೋಡಿನಲ್ಲಿ ಕಿಟ್ ವಿತರಣೆ ಮಾಡಲಾಗುವುದು ಎಂದು ವಿವರಿಸಿದರು.</p>.<p>ಹರಿಹರದಲ್ಲಿ ಬಿತ್ತನೆ ಬೀಜ, ಗೊಬ್ಬರದ ಬಗ್ಗೆ ಪರಿಶೀಲನೆ ನಡೆಸಲಾಯಿತು. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ₹ 1.10 ಕೋಟಿ ವೆಚ್ಚದಲ್ಲಿ 26 ಸಾವಿರ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆಗೆ ಸಿದ್ಧತೆ ಮಾಡಲಾಗಿದೆ. ಪಡಿತರ ಚೀಟಿ ಇಲ್ಲದ 8,000 ಮಂದಿಯನ್ನು ಗುರುತಿಸಲಾಗಿದೆ. ಅವರಿಗೆ ಪಡಿತರ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಲೋಕಸಭಾ ಕ್ಷೇತ್ರದಲ್ಲಿ 83 ಸಾವಿರ ನೋಂದಾಯಿತ ಕಾರ್ಮಿಕರಿದ್ದಾರೆ. ಅದರಲ್ಲಿ ಸುಮಾರು 71 ಸಾವಿರ ಮಂದಿಗೆ ತಲಾ ₹ 2 ಸಾವಿರದಂತೆ ₹ 14.2 ಕೋಟಿ ಜಮಾ ಮಾಡಲಾಗಿದೆ. ಉಳಿದ 12 ಸಾವಿರ ಮಂದಿಯ ಬ್ಯಾಂಕ್ ವಿವರ ಸಂಗ್ರಹಿಸಲಾಗಿದೆ. ಅವರ ಖಾತೆಗೂ ಶೀಘ್ರದಲ್ಲಿ ₹ 2 ಸಾವಿರ ಜಮಾ ಆಗಲಿದೆ ಎಂದು ತಿಳಿಸಿದರು.</p>.<p>ಮುಂದಿನ ಸೋಮವಾರದಲ್ಲಿ ಮಾಯಕೊಂಡ, ದಾವಣಗೆರೆ ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು.</p>.<p>ಪಿಪಿಇ ಕಿಟ್ ಎಷ್ಟು ಅಗತ್ಯ ಇದೆಯೋ ಅದನ್ನು ಪೂರೈಸಲು ಸರ್ಕಾರ ತಯಾರಿದೆ. ಆದನ್ನು ಆಸ್ಪತ್ರೆಯಲ್ಲಿ ಕೆಲಸ ಮಾಡುವ ಎಲ್ಲರೂ ಬಳಸುವುದಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಾರ ಯಾರಿಗೆ ನೀಡಬೇಕೋ ಅವರಿಗಷ್ಟೇ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ.ಎನ್. ಲಿಂಗಣ್ಣ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>