<p><strong>ಹೊನ್ನಾಳಿ:</strong> ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಮುಂಗಾರು ಆರಂಭಕ್ಕೂ ಮುನ್ನ ಧಾರಾಕಾರವಾಗಿ ಮಳೆ ಸುರಿದಿದೆ. 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಲಾದ ಕೃಷಿ ಹೊಂಡಗಳು ಬಹುತೇಕ ಭರ್ತಿಯಾಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್ ಹೇಳಿದರು.</p>.<p>ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಈವರೆಗೆ ಕ್ರಮವಾಗಿ 146 ಮಿ.ಮೀ ಹಾಗೂ 109 ಮಿ.ಮೀ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ ಎಂದು ತಿಳಿಸಿದರು.</p>.<p>ಪ್ರಸಕ್ತ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ 50 ಕೃಷಿ ಹೊಂಡಗಳನ್ನು ನಿರ್ಮಿಸುವ ಗುರಿ ಇದ್ದು, ಯೋಜನೆಯನ್ನು ಸರ್ಮಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ. ಕೃಷಿ ಇಲಾಖೆಯಿಂದ ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ, ಕೀಟನಾಶಕ ಮತ್ತು ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದರು.</p>.<p>ಅವಳಿ ತಾಲ್ಲೂಕುಗಳ ಕಸಬಾ, ಸಾಸ್ವೇಹಳ್ಳಿ, ಕುಂದೂರು, ನ್ಯಾಮತಿ, ಚೀಲೂರು ಮತ್ತು ಗೋವಿನಕೊವಿ ರೈತ ಸಂಪರ್ಕ ಕೇಂದ್ರಗಳಲ್ಲಿ ಸರ್ಕಾರದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬೇಕೆಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಮುಂಗಾರು ಆರಂಭಕ್ಕೂ ಮುನ್ನ ಧಾರಾಕಾರವಾಗಿ ಮಳೆ ಸುರಿದಿದೆ. 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಲಾದ ಕೃಷಿ ಹೊಂಡಗಳು ಬಹುತೇಕ ಭರ್ತಿಯಾಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್ ಹೇಳಿದರು.</p>.<p>ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಈವರೆಗೆ ಕ್ರಮವಾಗಿ 146 ಮಿ.ಮೀ ಹಾಗೂ 109 ಮಿ.ಮೀ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ ಎಂದು ತಿಳಿಸಿದರು.</p>.<p>ಪ್ರಸಕ್ತ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ 50 ಕೃಷಿ ಹೊಂಡಗಳನ್ನು ನಿರ್ಮಿಸುವ ಗುರಿ ಇದ್ದು, ಯೋಜನೆಯನ್ನು ಸರ್ಮಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ. ಕೃಷಿ ಇಲಾಖೆಯಿಂದ ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ, ಕೀಟನಾಶಕ ಮತ್ತು ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದರು.</p>.<p>ಅವಳಿ ತಾಲ್ಲೂಕುಗಳ ಕಸಬಾ, ಸಾಸ್ವೇಹಳ್ಳಿ, ಕುಂದೂರು, ನ್ಯಾಮತಿ, ಚೀಲೂರು ಮತ್ತು ಗೋವಿನಕೊವಿ ರೈತ ಸಂಪರ್ಕ ಕೇಂದ್ರಗಳಲ್ಲಿ ಸರ್ಕಾರದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬೇಕೆಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>