<p>ದಾವಣಗೆರೆ: ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಎಫ್ಐಆರ್ ದಾಖಲಾಗಿದ್ದ ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗದ 10 ನೌಕರರನ್ನು ಅಮಾನತು ಮಾಡಲಾಗಿದೆ.</p>.<p>ಹರಿಹರ ಡಿಪೊದ 6 ಹಾಗೂ ದಾವಣಗೆರೆ ಡಿಪೊದ 4 ಮಂದಿಯನ್ನು ಅಮಾನತು ಮಾಡಿದ್ದು, ಮನವಿಯ ಮೇರೆಗೆ ದಾವಣಗೆರೆಗೆ ವರ್ಗಾವಣೆಗೊಂಡಿದ್ದ 66 ನೌಕರರನ್ನು ಪುತ್ತೂರು, ಶಿವಮೊಗ್ಗ ಹಾಗೂ ಮಂಗಳೂರು ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್. ಹೆಬ್ಬಾಳ್<br />ತಿಳಿಸಿದರು.</p>.<p>ದಾವಣಗೆರೆಯ 66 ಮಂದಿ ಎರಡು ವರ್ಷಗಳ ಹಿಂದೆ ದಾವಣಗೆರೆಗೆ ವರ್ಗಾವಣೆಯಾಗಿದ್ದರು. ಆದರೆ ಅವರು ಕರ್ತವ್ಯಕ್ಕೆ ಹಾಜರಾಗದ ಕಾರಣ ಈ ಹಿಂದಿನ ಜಾಗಗಳಿಗೆ ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<p>ಮುಷ್ಕರದ ನಡುವೆಯೂ ಮಂಗಳವಾರ 95 ಬಸ್ಗಳು ಸಂಚರಿಸಿದ್ದು, 150ಕ್ಕೂ ಹೆಚ್ಚು ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬೆಂಗಳೂರು, ಶಿವಮೊಗ್ಗ, ಹೊಸಪೇಟೆ, ಬಳ್ಳಾರಿ ಹಾಗೂ ಹರಪನಹಳ್ಳಿ ಕಡೆಗಳಿಗೆ ಹೆಚ್ಚಿನ ಬಸ್ಗಳು ಸಂಚರಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಎಫ್ಐಆರ್ ದಾಖಲಾಗಿದ್ದ ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗದ 10 ನೌಕರರನ್ನು ಅಮಾನತು ಮಾಡಲಾಗಿದೆ.</p>.<p>ಹರಿಹರ ಡಿಪೊದ 6 ಹಾಗೂ ದಾವಣಗೆರೆ ಡಿಪೊದ 4 ಮಂದಿಯನ್ನು ಅಮಾನತು ಮಾಡಿದ್ದು, ಮನವಿಯ ಮೇರೆಗೆ ದಾವಣಗೆರೆಗೆ ವರ್ಗಾವಣೆಗೊಂಡಿದ್ದ 66 ನೌಕರರನ್ನು ಪುತ್ತೂರು, ಶಿವಮೊಗ್ಗ ಹಾಗೂ ಮಂಗಳೂರು ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್. ಹೆಬ್ಬಾಳ್<br />ತಿಳಿಸಿದರು.</p>.<p>ದಾವಣಗೆರೆಯ 66 ಮಂದಿ ಎರಡು ವರ್ಷಗಳ ಹಿಂದೆ ದಾವಣಗೆರೆಗೆ ವರ್ಗಾವಣೆಯಾಗಿದ್ದರು. ಆದರೆ ಅವರು ಕರ್ತವ್ಯಕ್ಕೆ ಹಾಜರಾಗದ ಕಾರಣ ಈ ಹಿಂದಿನ ಜಾಗಗಳಿಗೆ ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<p>ಮುಷ್ಕರದ ನಡುವೆಯೂ ಮಂಗಳವಾರ 95 ಬಸ್ಗಳು ಸಂಚರಿಸಿದ್ದು, 150ಕ್ಕೂ ಹೆಚ್ಚು ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬೆಂಗಳೂರು, ಶಿವಮೊಗ್ಗ, ಹೊಸಪೇಟೆ, ಬಳ್ಳಾರಿ ಹಾಗೂ ಹರಪನಹಳ್ಳಿ ಕಡೆಗಳಿಗೆ ಹೆಚ್ಚಿನ ಬಸ್ಗಳು ಸಂಚರಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>