<p><strong>ದಾವಣಗೆರೆ:</strong> ಕರ್ನಾಟಕದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಕಾರ್ಖಾನೆಗಳ ಪುನಃಶ್ಚೇತನಕ್ಕೆ ಅಡ್ಡಿಪಡಿಸುವ ಮೂಲಕ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸಿದ್ಧವಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.</p><p>‘ಕುದುರೆಮುಖ ಕಬ್ಬಿಣ ಅದಿರು ಕಂಪನಿಗೆ (ಕೆಐಒಸಿಎಲ್) ಕೇಂದ್ರ ಸರ್ಕಾರ ₹ 1,700 ಕೋಟಿ ಬಂಡವಾಳ ನೀಡಿದೆ. ವಿನಾ ಕಾರಣ ರಾಜಕಾರಣ ಮಾಡಿ ಕಂಪನಿ ಮುಳುಗಿಸುವ ಹುನ್ನಾರಕ್ಕೆ ರಾಜ್ಯ ಸರ್ಕಾರ ಕೈಹಾಕಿದೆ. ಅರಣ್ಯ ಕಾಯ್ದೆಯನ್ನು ಮುಂದಿಟ್ಟುಕೊಂಡು ಎಚ್ಎಂಟಿ ಪುನಃಶ್ಚೇತನಕ್ಕೆ ಅಡ್ಡಿಪಡಿಸುತ್ತಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ಹೊರಹಾಕಿದರು.</p><p>‘ಪಕ್ಕದ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ₹ 35,000 ಕೋಟಿ ಸಾಲ ಹೊಂದಿದ್ದ ಉಕ್ಕು ಕಾರ್ಖಾನೆ ಪುನರಾರಂಭ ಮಾಡಿದ್ದೇವೆ. ₹ 1.25 ಲಕ್ಷ ಕೋಟಿ ಬಂಡವಾಳದ ಹೊಸ ಕಾರ್ಖಾನೆಯೊಂದು ಸ್ಥಾಪನೆಯಾಗುತ್ತಿದೆ. ಕೇಂದ್ರ ಸರ್ಕಾರ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟು ಸೌಹಾರ್ದಯುತವಾಗಿ ವ್ಯವಹಾರಿಸಿ. ಆಂಧ್ರಪ್ರದೇಶ ಸರ್ಕಾರವನ್ನು ನೋಡಿ ಕಲಿಯಿರಿ’ ಎಂದು ಕುಟುಕಿದರು.</p><p>‘ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ವೀಲ್ಚೇರ್ನಲ್ಲಿ ಸಂಸತ್ ಅಧಿವೇಶನಕ್ಕೆ ತೆರಳಿ ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗೆ ಇದ್ದ ಅಡೆತಡೆಗಳನ್ನು ನಿವಾರಿಸಿದ್ದಾರೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯದ ಸಮಸ್ಯೆಗಳಿಗೆ ಎಷ್ಟು ಬಾರಿ ಧ್ವನಿಯತ್ತಿದ್ದಾರೆ’ ಎಂದು ಪ್ರಶ್ನಿಸಿದರು.</p>.<div><blockquote>ಮುಖ್ಯಮಂತ್ರಿ ಕುರ್ಚಿ ಅಲ್ಲಾಡುವಾಗ ಮಾತ್ರ ಸಿದ್ದರಾಮಯ್ಯ ಅವರಿಗೆ ‘ಅಹಿಂದ’ ಕನವರಿಕೆ ಶುರುವಾಗುತ್ತದೆ. ಕುರ್ಚಿ ಭದ್ರವಾಗಿದ್ದಾಗ ‘ಅಹಿಂದ’ ನೆನಪಾಗುವುದಿಲ್ಲ </blockquote><span class="attribution">ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ</span></div>.<p><strong>‘ಎಚ್ಡಿಕೆ ಕಾಗದ ಹುಲಿ’</strong></p><p>‘ಕೈಗಾರಿಕಾಭಿವೃದ್ಧಿಗೆ ಆಗುತ್ತಿರುವ ತೊಡಕುಗಳ ಬಗೆಗೆ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಗಮನಕ್ಕೆ ತಂದರೆ ಅನುಕೂಲ. ಇದನ್ನು ಬಿಟ್ಟು ಮಾಧ್ಯಮಗಳ ಎದುರು ಹೇಳಿ ಕಾಗದ ಹುಲಿ ಆಗುತ್ತಿದ್ದಾರೆ’ ಎಂದು ಕೈಗಾರಿಕಾಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿರುಗೇಟು ನೀಡಿದರು.</p><p>‘ಎಚ್.ಡಿ. ಕುಮಾರಸ್ವಾಮಿ ಅವರು ಆಟೊಮೊಬೈಲ್ ಕೈಗಾರಿಕೆಗೆ ಮಂಡ್ಯದಲ್ಲಿ 100 ಎಕರೆ ಭೂಮಿ ಕೇಳಿದ್ದರು. ರಾಜ್ಯ ಸರ್ಕಾರ 105 ಎಕರೆ ಭೂಮಿ ಕೊಟ್ಟಿದೆ. ಎಚ್ಎಂಟಿ ಪುನಃಶ್ಚೇತನದ ವಿಚಾರದಲ್ಲಿ ಎದುರಾಗಿರುವ ತೊಡಕುಗಳಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ. ಅರಣ್ಯ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ತೊಡಕುಗಳು ಎದುರಾಗಿರಬಹುದು’ ಎಂದು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕರ್ನಾಟಕದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಕಾರ್ಖಾನೆಗಳ ಪುನಃಶ್ಚೇತನಕ್ಕೆ ಅಡ್ಡಿಪಡಿಸುವ ಮೂಲಕ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸಿದ್ಧವಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.</p><p>‘ಕುದುರೆಮುಖ ಕಬ್ಬಿಣ ಅದಿರು ಕಂಪನಿಗೆ (ಕೆಐಒಸಿಎಲ್) ಕೇಂದ್ರ ಸರ್ಕಾರ ₹ 1,700 ಕೋಟಿ ಬಂಡವಾಳ ನೀಡಿದೆ. ವಿನಾ ಕಾರಣ ರಾಜಕಾರಣ ಮಾಡಿ ಕಂಪನಿ ಮುಳುಗಿಸುವ ಹುನ್ನಾರಕ್ಕೆ ರಾಜ್ಯ ಸರ್ಕಾರ ಕೈಹಾಕಿದೆ. ಅರಣ್ಯ ಕಾಯ್ದೆಯನ್ನು ಮುಂದಿಟ್ಟುಕೊಂಡು ಎಚ್ಎಂಟಿ ಪುನಃಶ್ಚೇತನಕ್ಕೆ ಅಡ್ಡಿಪಡಿಸುತ್ತಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ಹೊರಹಾಕಿದರು.</p><p>‘ಪಕ್ಕದ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ₹ 35,000 ಕೋಟಿ ಸಾಲ ಹೊಂದಿದ್ದ ಉಕ್ಕು ಕಾರ್ಖಾನೆ ಪುನರಾರಂಭ ಮಾಡಿದ್ದೇವೆ. ₹ 1.25 ಲಕ್ಷ ಕೋಟಿ ಬಂಡವಾಳದ ಹೊಸ ಕಾರ್ಖಾನೆಯೊಂದು ಸ್ಥಾಪನೆಯಾಗುತ್ತಿದೆ. ಕೇಂದ್ರ ಸರ್ಕಾರ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟು ಸೌಹಾರ್ದಯುತವಾಗಿ ವ್ಯವಹಾರಿಸಿ. ಆಂಧ್ರಪ್ರದೇಶ ಸರ್ಕಾರವನ್ನು ನೋಡಿ ಕಲಿಯಿರಿ’ ಎಂದು ಕುಟುಕಿದರು.</p><p>‘ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ವೀಲ್ಚೇರ್ನಲ್ಲಿ ಸಂಸತ್ ಅಧಿವೇಶನಕ್ಕೆ ತೆರಳಿ ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗೆ ಇದ್ದ ಅಡೆತಡೆಗಳನ್ನು ನಿವಾರಿಸಿದ್ದಾರೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯದ ಸಮಸ್ಯೆಗಳಿಗೆ ಎಷ್ಟು ಬಾರಿ ಧ್ವನಿಯತ್ತಿದ್ದಾರೆ’ ಎಂದು ಪ್ರಶ್ನಿಸಿದರು.</p>.<div><blockquote>ಮುಖ್ಯಮಂತ್ರಿ ಕುರ್ಚಿ ಅಲ್ಲಾಡುವಾಗ ಮಾತ್ರ ಸಿದ್ದರಾಮಯ್ಯ ಅವರಿಗೆ ‘ಅಹಿಂದ’ ಕನವರಿಕೆ ಶುರುವಾಗುತ್ತದೆ. ಕುರ್ಚಿ ಭದ್ರವಾಗಿದ್ದಾಗ ‘ಅಹಿಂದ’ ನೆನಪಾಗುವುದಿಲ್ಲ </blockquote><span class="attribution">ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ</span></div>.<p><strong>‘ಎಚ್ಡಿಕೆ ಕಾಗದ ಹುಲಿ’</strong></p><p>‘ಕೈಗಾರಿಕಾಭಿವೃದ್ಧಿಗೆ ಆಗುತ್ತಿರುವ ತೊಡಕುಗಳ ಬಗೆಗೆ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಗಮನಕ್ಕೆ ತಂದರೆ ಅನುಕೂಲ. ಇದನ್ನು ಬಿಟ್ಟು ಮಾಧ್ಯಮಗಳ ಎದುರು ಹೇಳಿ ಕಾಗದ ಹುಲಿ ಆಗುತ್ತಿದ್ದಾರೆ’ ಎಂದು ಕೈಗಾರಿಕಾಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿರುಗೇಟು ನೀಡಿದರು.</p><p>‘ಎಚ್.ಡಿ. ಕುಮಾರಸ್ವಾಮಿ ಅವರು ಆಟೊಮೊಬೈಲ್ ಕೈಗಾರಿಕೆಗೆ ಮಂಡ್ಯದಲ್ಲಿ 100 ಎಕರೆ ಭೂಮಿ ಕೇಳಿದ್ದರು. ರಾಜ್ಯ ಸರ್ಕಾರ 105 ಎಕರೆ ಭೂಮಿ ಕೊಟ್ಟಿದೆ. ಎಚ್ಎಂಟಿ ಪುನಃಶ್ಚೇತನದ ವಿಚಾರದಲ್ಲಿ ಎದುರಾಗಿರುವ ತೊಡಕುಗಳಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ. ಅರಣ್ಯ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ತೊಡಕುಗಳು ಎದುರಾಗಿರಬಹುದು’ ಎಂದು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>