ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕ ಜಯಂತಿ ರದ್ದು ಮಾಡಲು ಕುರುಬ ಸಮುದಾಯ ಮುಖಂಡರ ಆಗ್ರಹ

Last Updated 8 ನವೆಂಬರ್ 2019, 8:41 IST
ಅಕ್ಷರ ಗಾತ್ರ

ದಾವಣಗೆರೆ: ಮುಂದಿನ ವರ್ಷದಿಂದ ಕನಕ ಜಯಂತಿ ರದ್ದು ಮಾಡುವಂತೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಿಎಂದು ಕುರುಬ ಸಮಾಜದ ಮುಖಂಡರು ಜಿಲ್ಲಾಧಿಕಾರಿಗೆ ಆಗ್ರಹಿಸಿದರು. ಕನಕ ಜಯಂತಿ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಮುಖಂಡರು ಈ ವಿಚಾರವನ್ನು ಜಿಲ್ಲಾಧಿಕಾರಿಗೆ ತಿಳಿಸಿದರು.

ಸಮಾಜದ ಮುಖಂಡರಾದ ಪರಶುರಾಮಪ್ಪ ಅವರು, ‘ಪ್ರತಿಯೊಂದು ಜಾತಿಯವರಿಗೂ ಒಂದೊಂದು ಜಯಂತಿ ಇದೆ. ‍ಪ್ರತಿಜಯಂತಿಗೂಒಂದೊಂದು ದಿನ ರಜೆ ನೀಡುವುದು ಬೇಡ. ಟಿಪ್ಪು ಜಯಂತಿ ಆರಂಭಿಸಿ ಸರ್ಕಾರ ಈಗ ರದ್ದು ಮಾಡಲು ಹೊರಟಿದೆ. ನಮ್ಮ ಸಮಾಜಕ್ಕೂ ಹೀಗಾಗುವುದು ಬೇಡ, ಮಹಾನ್ ನಾಯಕರ ಜಯಂತಿಗಳು ಈಗ ಜಾತಿಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ,’ಎಂದು ಹೇಳಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸುತ್ತೇನೆಎಂದರು. ಸಭೆಯಲ್ಲಿಕೆಂಗೊ ಹನುಮಂತಪ್ಪ ಸೇರಿದಂತೆ ಕುರುಬ ಸಮಾಜದ ಹಲವು ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT