ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು)ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಐಎನ್ಟಿಯುಸಿ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಎಲ್ಐಸಿ, ಬಿಎಸ್ಎನ್ಎಲ್, ಬ್ಯಾಂಕ್, ಪೋಸ್ಟಲ್, ರೈತ ಹಾಗೂ ಇತರೆ ಸಂಘಟನೆಗಳು ಭಾಗವಹಿಸಲಿವೆ. ವಿವಿಧ ಸಂಘಟನೆಗಳ ಮುಖಂಡರಾದ ಎಚ್.ವಿ. ಅನಂತ ಸುಬ್ಬರಾವ್, ಕೆ. ಮಹಾಂತೇಶ, ಷಣ್ಮುಗಂ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.