<p><strong>ದಾವಣಗೆರೆ:</strong> ತಾಲ್ಲೂಕಿನ ಹೊನ್ನೂರು ಗ್ರಾಮದ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಶನಿವಾರ ಆರಂಭವಾಗಿದೆ. ರೈತರ ವಿರೋಧದ ನಡುವೆಯೂ ಕೆರೆಯ ಗಡಿ ಗುರುತು ಮಾಡಿದ ಅಧಿಕಾರಿಗಳ ತಂಡ, ಅಂಗಳದಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದೆ.</p>.<p>ಜಿಲ್ಲಾಡಳಿತದ ಈ ಕ್ರಮಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳದ ಫಸಲು ಕೈಸೇರುವವರೆಗೂ ಕಾಲಾವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸದ ಅಧಿಕಾರಿಗಳು, ಒತ್ತುವರಿಯ ಅರ್ಧ ಭಾಗದಷ್ಟು ಪ್ರದೇಶವನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಹೊನ್ನೂರು ಗ್ರಾಮದಲ್ಲಿ 392 ಎಕರೆ ವಿಸ್ತೀರ್ಣದ ಕೆರೆ ಇದೆ. ಈ ಕೆರೆಯ ಒಂದಷ್ಟು ಭಾಗವನ್ನು ಒತ್ತುವರಿ ಮಾಡಿಕೊಂಡಿದ್ದ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದರು. ಕೆರೆಗೆ ಹರಿದು ಬರುತ್ತಿದ್ದ ನೀರಿನ ಮಾರ್ಗಗಳು ಮುಚ್ಚಿಹೋಗಿದ್ದವು. ಈ ಕುರಿತು ಇದೇ ಗ್ರಾಮದ ಕೆಲ ರೈತರು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ದೂರು ನೀಡಿದ್ದರು. ಈಚೆಗೆ ನಡೆದ ಸಭೆಯಲ್ಲಿ ಕೂಡ ಗಮನ ಸೆಳೆದಿದ್ದರು.</p>.<p>ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಒತ್ತುವರಿ ತೆರವಿಗೆ ಸೂಚನೆ ನೀಡಿತ್ತು. ಕಂದಾಯ, ಸಣ್ಣ ನೀರಾವರಿ ಇಲಾಖೆ ಹಾಗೂ ಪೊಲೀಸರ ತಂಡ ಗ್ರಾಮಕ್ಕೆ ಭೇಟಿ ನೀಡಿ ಕೆರೆಯ ಗಡಿ ಗುರುತಿಸಿತ್ತು. ಕೆರೆಯ ಸುತ್ತ ಕಂದಕ ತೆಗೆದು ರೈತರಿಗೆ ಎಚ್ಚರಿಕೆ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ತಾಲ್ಲೂಕಿನ ಹೊನ್ನೂರು ಗ್ರಾಮದ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಶನಿವಾರ ಆರಂಭವಾಗಿದೆ. ರೈತರ ವಿರೋಧದ ನಡುವೆಯೂ ಕೆರೆಯ ಗಡಿ ಗುರುತು ಮಾಡಿದ ಅಧಿಕಾರಿಗಳ ತಂಡ, ಅಂಗಳದಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದೆ.</p>.<p>ಜಿಲ್ಲಾಡಳಿತದ ಈ ಕ್ರಮಕ್ಕೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳದ ಫಸಲು ಕೈಸೇರುವವರೆಗೂ ಕಾಲಾವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸದ ಅಧಿಕಾರಿಗಳು, ಒತ್ತುವರಿಯ ಅರ್ಧ ಭಾಗದಷ್ಟು ಪ್ರದೇಶವನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಹೊನ್ನೂರು ಗ್ರಾಮದಲ್ಲಿ 392 ಎಕರೆ ವಿಸ್ತೀರ್ಣದ ಕೆರೆ ಇದೆ. ಈ ಕೆರೆಯ ಒಂದಷ್ಟು ಭಾಗವನ್ನು ಒತ್ತುವರಿ ಮಾಡಿಕೊಂಡಿದ್ದ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದರು. ಕೆರೆಗೆ ಹರಿದು ಬರುತ್ತಿದ್ದ ನೀರಿನ ಮಾರ್ಗಗಳು ಮುಚ್ಚಿಹೋಗಿದ್ದವು. ಈ ಕುರಿತು ಇದೇ ಗ್ರಾಮದ ಕೆಲ ರೈತರು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ದೂರು ನೀಡಿದ್ದರು. ಈಚೆಗೆ ನಡೆದ ಸಭೆಯಲ್ಲಿ ಕೂಡ ಗಮನ ಸೆಳೆದಿದ್ದರು.</p>.<p>ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಒತ್ತುವರಿ ತೆರವಿಗೆ ಸೂಚನೆ ನೀಡಿತ್ತು. ಕಂದಾಯ, ಸಣ್ಣ ನೀರಾವರಿ ಇಲಾಖೆ ಹಾಗೂ ಪೊಲೀಸರ ತಂಡ ಗ್ರಾಮಕ್ಕೆ ಭೇಟಿ ನೀಡಿ ಕೆರೆಯ ಗಡಿ ಗುರುತಿಸಿತ್ತು. ಕೆರೆಯ ಸುತ್ತ ಕಂದಕ ತೆಗೆದು ರೈತರಿಗೆ ಎಚ್ಚರಿಕೆ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>