ಪ್ರವಾಸಿ ಮಂದಿರ ರಸ್ತೆ, ಪಾಲಿಕೆ ಮುಂಭಾಗ, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ, ಗಡಿಯಾರ ಕಂಬ, ಕಾಯಿಪೇಟೆ, ವಿಜಯಲಕ್ಷ್ಮಿ ರಸ್ತೆ, ಚಾಮರಾಜಪೇಟೆ ಸರ್ಕಲ್, ಕೆ.ಆರ್. ಮಾರುಕಟ್ಟೆ, ಮಂಡಿ ಪೇಟೆ, ನಿಟುವಳ್ಳಿ ಸಹಿತ ಎಲ್ಲ ಕಡೆಗಳಲ್ಲಿ ಗುರುವಾರವೂ ಜನಜಂಗುಳಿ ಉಂಟಾಗಿತ್ತು. ವ್ಯಾಪಾರ ಜೋರಾಗಿ ನಡೆಯಿತು. ದಿನಸಿ, ಬಟ್ಟೆ ಅಂಗಡಿಗಳಲ್ಲಿ ಭಾರಿ ಸಂಖ್ಯೆಯಲ್ಲಿ ಗ್ರಾಹಕರು ಸೇರಿದ್ದರು. ಹೊಸಬಟ್ಟೆ, ಪೂಜಾ ಸಾಮಗ್ರಿ ಖರೀದಿ ಜೋರಾಗಿ ನಡೆಯಿತು. ಬಾಳೆಕಂದು, ಮಾವಿನಸೊಪ್ಪು, ಚೆಂಡು ಹೂವು, ಕಾಕಡ, ಸೇವಂತಿಗೆ, ಬಟನ್ ಗುಲಾಬಿ, ಸಹಿತ ವಿವಿಧ ಹೂವುಗಳು, ಕುಂಬಳಕಾಯಿಗೆ ಬೇಡಿಕೆಹೆಚ್ಚಿತ್ತು.