<p><strong>ಚನ್ನಗಿರಿ</strong>: ತಾಲ್ಲೂಕಿನ ದೇವರಹಳ್ಳಿಯಲ್ಲಿ ಲಕ್ಷ್ಮಿರಂಗನಾಥಸ್ವಾಮಿ ದೊಡ್ಡ ರಥೋತ್ಸವ ಭಾನುವಾರ ಮುಂಜಾನೆ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆಯಿಂದಲೇ ಭಕ್ತರು ವಾಹನಗಳು ಹಾಗೂ ಎತ್ತಿನಗಾಡಿಗಳಲ್ಲಿ ಬಂದು ರಥೋತ್ಸವದಲ್ಲಿ ಭಾಗಿಯಾದರು.</p>.<p>ಸ್ವಾಮಿಯ ಉತ್ಸವಮೂರ್ತಿಯನ್ನು ವಿವಿಧ ಮಂಗಳವಾದ್ಯಗಳ ಮೇಳದೊಂದಿಗೆ ಅಡ್ಡ ಪಲ್ಲಕ್ಕಿಯಲ್ಲಿ ತಂದು ರಥದಲ್ಲಿ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ 180 ಅಡಿಗಳಿಗಿಂತಲೂ ಎತ್ತರ ಬೆಟ್ಟದ ಮೇಲಿಂದ ರಥವನ್ನು ಭಕ್ತರು 1 ಕಿ.ಮೀ ದೂರದವರೆಗೆ ಎಳೆದರು.</p>.<p>ರಥವನ್ನು ಬೆಟ್ಟದ ಮೇಲಿಂದ ಕೆಳಗಿಳಿಸಿ, ನಂತರ ಮತ್ತೆ ಬೆಟ್ಟದ ಮೇಲೆ ಇರುವ ದೇವಸ್ಥಾನದ ಆವರಣದವರೆಗೆ ಎಳೆದುಕೊಂಡು ಹೋದರು. ರಥವನ್ನು ಎಳೆಯುತ್ತಿದ್ದಂತೆ ನೆರೆದಿದ್ದ ಭಕ್ತರು ‘ಗೋವಿಂದ, ಗೋವಿಂದ’ ಎಂಬ ಜಯಘೋಷ ಹಾಕಿದರು. ಬಾಳೆಹಣ್ಣು, ಮೆಣಸು, ಮಂಡಕ್ಕಿಯನ್ನು ಎಸೆದು ಹರಕೆ ಸಮರ್ಪಿಸಿದರು.</p>.<p>ರಥೋತ್ಸವದ ನಂತರ ಎತ್ತಿನಗಾಡಿಗಳಲ್ಲಿ ತಂದ ಪಾನಕ ಹಾಗೂ ಕೋಸುಂಬರಿಯನ್ನು ನೆರೆದಿದ್ದ ಭಕ್ತರಿಗೆ ವಿತರಿಸಲಾಯಿತು.</p>.<p>ಲಕ್ಷ್ಮಿರಂಗನಾಥಸ್ವಾಮಿ ದೇವಸ್ಥಾನವನ್ನು ವಿಜಯನಗರದ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ನಿರ್ಮಿಸಲಾಗಿದೆ ಎಂಬ ಐತಿಹ್ಯ ಇದೆ. ಸ್ವಾಮಿ ‘ಉಡ’ದ ರೂಪದಲ್ಲಿ ಬೆಟ್ಟದ ಮೇಲೆ ಬಂದು ನೆಲೆಸಿದ್ದರಿಂದ ಈ ದೇವರಿಗೆ ಉಡುಗಿರಿ ಲಕ್ಷ್ಮಿರಂಗನಾಥ ಸ್ವಾಮಿ ಹೆಸರು ಇದೆ. ಈ ಭಾಗದಲ್ಲಿ ಉಡದ ದೇವಸ್ಥಾನವನ್ನು ಕಟ್ಟಿ ಪೂಜೆಯನ್ನು ಸಲ್ಲಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ತಾಲ್ಲೂಕಿನ ದೇವರಹಳ್ಳಿಯಲ್ಲಿ ಲಕ್ಷ್ಮಿರಂಗನಾಥಸ್ವಾಮಿ ದೊಡ್ಡ ರಥೋತ್ಸವ ಭಾನುವಾರ ಮುಂಜಾನೆ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆಯಿಂದಲೇ ಭಕ್ತರು ವಾಹನಗಳು ಹಾಗೂ ಎತ್ತಿನಗಾಡಿಗಳಲ್ಲಿ ಬಂದು ರಥೋತ್ಸವದಲ್ಲಿ ಭಾಗಿಯಾದರು.</p>.<p>ಸ್ವಾಮಿಯ ಉತ್ಸವಮೂರ್ತಿಯನ್ನು ವಿವಿಧ ಮಂಗಳವಾದ್ಯಗಳ ಮೇಳದೊಂದಿಗೆ ಅಡ್ಡ ಪಲ್ಲಕ್ಕಿಯಲ್ಲಿ ತಂದು ರಥದಲ್ಲಿ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ 180 ಅಡಿಗಳಿಗಿಂತಲೂ ಎತ್ತರ ಬೆಟ್ಟದ ಮೇಲಿಂದ ರಥವನ್ನು ಭಕ್ತರು 1 ಕಿ.ಮೀ ದೂರದವರೆಗೆ ಎಳೆದರು.</p>.<p>ರಥವನ್ನು ಬೆಟ್ಟದ ಮೇಲಿಂದ ಕೆಳಗಿಳಿಸಿ, ನಂತರ ಮತ್ತೆ ಬೆಟ್ಟದ ಮೇಲೆ ಇರುವ ದೇವಸ್ಥಾನದ ಆವರಣದವರೆಗೆ ಎಳೆದುಕೊಂಡು ಹೋದರು. ರಥವನ್ನು ಎಳೆಯುತ್ತಿದ್ದಂತೆ ನೆರೆದಿದ್ದ ಭಕ್ತರು ‘ಗೋವಿಂದ, ಗೋವಿಂದ’ ಎಂಬ ಜಯಘೋಷ ಹಾಕಿದರು. ಬಾಳೆಹಣ್ಣು, ಮೆಣಸು, ಮಂಡಕ್ಕಿಯನ್ನು ಎಸೆದು ಹರಕೆ ಸಮರ್ಪಿಸಿದರು.</p>.<p>ರಥೋತ್ಸವದ ನಂತರ ಎತ್ತಿನಗಾಡಿಗಳಲ್ಲಿ ತಂದ ಪಾನಕ ಹಾಗೂ ಕೋಸುಂಬರಿಯನ್ನು ನೆರೆದಿದ್ದ ಭಕ್ತರಿಗೆ ವಿತರಿಸಲಾಯಿತು.</p>.<p>ಲಕ್ಷ್ಮಿರಂಗನಾಥಸ್ವಾಮಿ ದೇವಸ್ಥಾನವನ್ನು ವಿಜಯನಗರದ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ನಿರ್ಮಿಸಲಾಗಿದೆ ಎಂಬ ಐತಿಹ್ಯ ಇದೆ. ಸ್ವಾಮಿ ‘ಉಡ’ದ ರೂಪದಲ್ಲಿ ಬೆಟ್ಟದ ಮೇಲೆ ಬಂದು ನೆಲೆಸಿದ್ದರಿಂದ ಈ ದೇವರಿಗೆ ಉಡುಗಿರಿ ಲಕ್ಷ್ಮಿರಂಗನಾಥ ಸ್ವಾಮಿ ಹೆಸರು ಇದೆ. ಈ ಭಾಗದಲ್ಲಿ ಉಡದ ದೇವಸ್ಥಾನವನ್ನು ಕಟ್ಟಿ ಪೂಜೆಯನ್ನು ಸಲ್ಲಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>