<p><strong>ದಾವಣಗೆರೆ: </strong>ಇಲ್ಲಿನ ಎಂ.ಸಿ.ಸಿ. ‘ಬಿ’ ಬ್ಲಾಕ್ನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ 21ನೇ ವರ್ಷದ ಬ್ರಹ್ಮ ರಥೋತ್ಸವ ಮಂಗಳವಾರ ಸಂಭ್ರಮದಿಂದ ನೆರವೇರಿತು.</p>.<p>ಮಧ್ಯಾಹ್ನ 12ಕ್ಕೆ ಆರಂಭಗೊಂಡ ರಥೋತ್ಸವ ದೇವಸ್ಥಾನದಿಂದ ಆರಂಭಗೊಂಡು ಹಿಂಭಾಗದ ರಸ್ತೆಯ ಮೂಲಕ ಮೆಡಿಕಲ್ ಕಾಲೇಜು ರಸ್ತೆಯ ಮೂಲಕ ದೇವಸ್ಥಾನಕ್ಕೆ ತಲುಪಿತು. ಈ ವೇಳೆ ಭಕ್ತರು ಗೋವಿಂದಾ.. ಗೋವಿಂದಾ.. ಎಂದು ನಾಮಸ್ಮರಣೆ ಮಾಡುತ್ತಾ ಭಕ್ತಿ ಪ್ರದರ್ಶಿಸಿದರು.</p>.<p>ರಥೋತ್ಸವದ ಅಂಗವಾಗಿ ಮೇ 11ರಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, 16ರಂದು ಹನುಮದ್ವಾಹನ ಉತ್ಸವದ ಮೂಲಕ ಸಮಾರೋಪಗೊಳ್ಳಲಿದೆ. 11ರಂದು ಅಂಕುರಾರ್ಪಣೆ, 12ರಂದು ಧ್ವಜಾರೋಹಣ ಉತ್ಸವ, 13ರಂದು ಬೆಳಿಗ್ಗೆ 11ಕ್ಕೆ ಗರುಡೋತ್ಸವ ಹಾಗೂ ಸಂಜೆ 6ಕ್ಕೆ ಕಲ್ಯಾಣೋತ್ಸವ ಜರುಗಿದವು.</p>.<p>‘ದಾವಣಗೆರೆ ನಗರ ಸೇರಿ ಸುತ್ತಮುತ್ತಲ ಗ್ರಾಮಗಳಿಂದ 6ಸಾವಿರಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದರು. ಸೋಮವಾರ ನಡೆದ ಕಲ್ಯಾಣೋತ್ಸವದಲ್ಲಿ ಸುಮಾರು 3 ಸಾವಿರ ಭಕ್ತರು ಪಾಲ್ಗೊಂಡಿದ್ದರು. ಹೆಚ್ಚಾಗಿ ಮಹಿಳೆಯರು ಪಾಲ್ಗೊಂಡಿದ್ದರು. ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ರಥೋತ್ಸವ ಶಾಂತವಾಗಿ ನೆರವೇರಿತು’ ಎಂದು ದೇವಸ್ಥಾನದ ಪ್ರಧಾನ ಟ್ರಸ್ಟಿ ಎಂ.ಎನ್. ರಾಮಮೋಹನ್ ತಿಳಿಸಿದರು.</p>.<p>ರಾಮನಗರದ ಕೋದಂಡರಾಮ ದೇವಸ್ಥಾನದ ಪ್ರಧಾನ ಆಗಮಿಕರಾದ ಪ್ರದ್ಯುಮ್ನ ನರಸಿಂಹ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಇಲ್ಲಿನ ಎಂ.ಸಿ.ಸಿ. ‘ಬಿ’ ಬ್ಲಾಕ್ನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ 21ನೇ ವರ್ಷದ ಬ್ರಹ್ಮ ರಥೋತ್ಸವ ಮಂಗಳವಾರ ಸಂಭ್ರಮದಿಂದ ನೆರವೇರಿತು.</p>.<p>ಮಧ್ಯಾಹ್ನ 12ಕ್ಕೆ ಆರಂಭಗೊಂಡ ರಥೋತ್ಸವ ದೇವಸ್ಥಾನದಿಂದ ಆರಂಭಗೊಂಡು ಹಿಂಭಾಗದ ರಸ್ತೆಯ ಮೂಲಕ ಮೆಡಿಕಲ್ ಕಾಲೇಜು ರಸ್ತೆಯ ಮೂಲಕ ದೇವಸ್ಥಾನಕ್ಕೆ ತಲುಪಿತು. ಈ ವೇಳೆ ಭಕ್ತರು ಗೋವಿಂದಾ.. ಗೋವಿಂದಾ.. ಎಂದು ನಾಮಸ್ಮರಣೆ ಮಾಡುತ್ತಾ ಭಕ್ತಿ ಪ್ರದರ್ಶಿಸಿದರು.</p>.<p>ರಥೋತ್ಸವದ ಅಂಗವಾಗಿ ಮೇ 11ರಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, 16ರಂದು ಹನುಮದ್ವಾಹನ ಉತ್ಸವದ ಮೂಲಕ ಸಮಾರೋಪಗೊಳ್ಳಲಿದೆ. 11ರಂದು ಅಂಕುರಾರ್ಪಣೆ, 12ರಂದು ಧ್ವಜಾರೋಹಣ ಉತ್ಸವ, 13ರಂದು ಬೆಳಿಗ್ಗೆ 11ಕ್ಕೆ ಗರುಡೋತ್ಸವ ಹಾಗೂ ಸಂಜೆ 6ಕ್ಕೆ ಕಲ್ಯಾಣೋತ್ಸವ ಜರುಗಿದವು.</p>.<p>‘ದಾವಣಗೆರೆ ನಗರ ಸೇರಿ ಸುತ್ತಮುತ್ತಲ ಗ್ರಾಮಗಳಿಂದ 6ಸಾವಿರಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದರು. ಸೋಮವಾರ ನಡೆದ ಕಲ್ಯಾಣೋತ್ಸವದಲ್ಲಿ ಸುಮಾರು 3 ಸಾವಿರ ಭಕ್ತರು ಪಾಲ್ಗೊಂಡಿದ್ದರು. ಹೆಚ್ಚಾಗಿ ಮಹಿಳೆಯರು ಪಾಲ್ಗೊಂಡಿದ್ದರು. ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ರಥೋತ್ಸವ ಶಾಂತವಾಗಿ ನೆರವೇರಿತು’ ಎಂದು ದೇವಸ್ಥಾನದ ಪ್ರಧಾನ ಟ್ರಸ್ಟಿ ಎಂ.ಎನ್. ರಾಮಮೋಹನ್ ತಿಳಿಸಿದರು.</p>.<p>ರಾಮನಗರದ ಕೋದಂಡರಾಮ ದೇವಸ್ಥಾನದ ಪ್ರಧಾನ ಆಗಮಿಕರಾದ ಪ್ರದ್ಯುಮ್ನ ನರಸಿಂಹ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>