<p><strong>ದಾವಣಗೆರೆ</strong>: ‘ಕರೂರು ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಸಂಸ್ಥೆಗೆ ಕಾನೂನುಬಾಹಿರವಾಗಿ ಜಮೀನು ಮಂಜೂರು ಮಾಡಲಾಗಿದೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಅವರು ಪ್ರಭಾವ ಬೀರಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ ಜಾಧವ ಆರೋಪಿಸಿದರು. </p>.<p>‘2005-06ನೇ ಸಾಲಿನಲ್ಲಿ 102.76 ಎಕರೆ ಪ್ರದೇಶವನ್ನು ಒಟ್ಟು 217 ಘಟಕಗಳಿಗೆ ನಿವೇಶನಗಳನ್ನಾಗಿ ಮಾಡಿ ಹಂಚಿಕೆ ಮಾಡಲಾಗಿದೆ. ಕೈಗಾರಿಕಾ ಪ್ರದೇಶವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. </p>.<p>‘ಕರೂರು ಕೈಗಾರಿಕಾ ಪ್ರದೇಶದ ನಿವೇಶನ ಸಂಖ್ಯೆ 68–ಡಿ ರಲ್ಲಿನ 1.50 ಎಕರೆ ಜಮೀನನ್ನು ಘನತ್ಯಾಜ್ಯ ಸಂಗ್ರಹಣೆ ಹಾಗೂ ನಿರ್ವಹಣೆಗಾಗಿ ಕಾಯ್ದಿರಿಸಲಾಗಿತ್ತು. ಈ ಜಮೀನಿನ ಇಂದಿನ ಬೆಲೆ ಅಂದಾಜು ₹ 15 ಕೋಟಿ ಆಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಬೇನಾಮಿ ಹೆಸರಿನ ಮೇಲೆ ಸ್ವಂತಕ್ಕೆ ಘನತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಘಟಕ ಸ್ಥಾಪನೆಯ ಹೆಸರಿನಲ್ಲಿ ಈ ಜಮೀನನ್ನು ಹಂಚಿಕೆ ಮಾಡಿಸಿಕೊಂಡಿದ್ದಾರೆ’ ಎಂದು ದೂರಿದರು. </p>.<p>‘ಎಚ್ಸಿಸಿ ಎಕೋ ರಿಸೈಕ್ಲರ್ಸ್ ಹೆಸರಿನಲ್ಲಿ ₹15 ಕೋಟಿ ಬಾಳುವ ಜಮೀನನ್ನು ಕೇವಲ ₹1.13 ಕೋಟಿ ಮೊತ್ತಕ್ಕೆ ಹಂಚಿಕೆ ಮಾಡಿಸಿಕೊಂಡಿದ್ದಾರೆ. ಆ ಮೂಲಕ ಜಿಲ್ಲೆಯ ಜನರಿಗೆ ಮೋಸ ಮಾಡಿದ್ದಾರೆ’ ಎಂದು ಆರೋಪಿಸಿದರು. </p>.<p>‘ಖಾಸಗಿ ಸಂಸ್ಥೆಗೆ ಅಕ್ರಮವಾಗಿ ಜಾಗ ನೀಡುವ ಆದೇಶವನ್ನು ರದ್ದುಪಡಿಸಬೇಕು. ಇಲ್ಲವಾದರೆ, ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕ ಬಿ.ಪಿ.ಹರೀಶ್ ಅವರು ಧ್ವನಿ ಎತ್ತಲಿದ್ದಾರೆ’ ಎಂದು ಹೇಳಿದರು. </p>.<p>ಮುಖಂಡರಾದ ಅಣಬೇರು ಜೀವನಮೂರ್ತಿ, ವಿಜಯಕುಮಾರ, ರಾಜನಹಳ್ಳಿ ಶಿವಕುಮಾರ್, ಟಿಂಕರ್ ಮಂಜಣ್ಣ, ಕಿಶೋರಕುಮಾರ, ಗೋವಿಂದರಾಜ್, ಶಂಕರಗೌಡ ಇನ್ನಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಕರೂರು ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಸಂಸ್ಥೆಗೆ ಕಾನೂನುಬಾಹಿರವಾಗಿ ಜಮೀನು ಮಂಜೂರು ಮಾಡಲಾಗಿದೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಅವರು ಪ್ರಭಾವ ಬೀರಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ ಜಾಧವ ಆರೋಪಿಸಿದರು. </p>.<p>‘2005-06ನೇ ಸಾಲಿನಲ್ಲಿ 102.76 ಎಕರೆ ಪ್ರದೇಶವನ್ನು ಒಟ್ಟು 217 ಘಟಕಗಳಿಗೆ ನಿವೇಶನಗಳನ್ನಾಗಿ ಮಾಡಿ ಹಂಚಿಕೆ ಮಾಡಲಾಗಿದೆ. ಕೈಗಾರಿಕಾ ಪ್ರದೇಶವನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. </p>.<p>‘ಕರೂರು ಕೈಗಾರಿಕಾ ಪ್ರದೇಶದ ನಿವೇಶನ ಸಂಖ್ಯೆ 68–ಡಿ ರಲ್ಲಿನ 1.50 ಎಕರೆ ಜಮೀನನ್ನು ಘನತ್ಯಾಜ್ಯ ಸಂಗ್ರಹಣೆ ಹಾಗೂ ನಿರ್ವಹಣೆಗಾಗಿ ಕಾಯ್ದಿರಿಸಲಾಗಿತ್ತು. ಈ ಜಮೀನಿನ ಇಂದಿನ ಬೆಲೆ ಅಂದಾಜು ₹ 15 ಕೋಟಿ ಆಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಬೇನಾಮಿ ಹೆಸರಿನ ಮೇಲೆ ಸ್ವಂತಕ್ಕೆ ಘನತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಘಟಕ ಸ್ಥಾಪನೆಯ ಹೆಸರಿನಲ್ಲಿ ಈ ಜಮೀನನ್ನು ಹಂಚಿಕೆ ಮಾಡಿಸಿಕೊಂಡಿದ್ದಾರೆ’ ಎಂದು ದೂರಿದರು. </p>.<p>‘ಎಚ್ಸಿಸಿ ಎಕೋ ರಿಸೈಕ್ಲರ್ಸ್ ಹೆಸರಿನಲ್ಲಿ ₹15 ಕೋಟಿ ಬಾಳುವ ಜಮೀನನ್ನು ಕೇವಲ ₹1.13 ಕೋಟಿ ಮೊತ್ತಕ್ಕೆ ಹಂಚಿಕೆ ಮಾಡಿಸಿಕೊಂಡಿದ್ದಾರೆ. ಆ ಮೂಲಕ ಜಿಲ್ಲೆಯ ಜನರಿಗೆ ಮೋಸ ಮಾಡಿದ್ದಾರೆ’ ಎಂದು ಆರೋಪಿಸಿದರು. </p>.<p>‘ಖಾಸಗಿ ಸಂಸ್ಥೆಗೆ ಅಕ್ರಮವಾಗಿ ಜಾಗ ನೀಡುವ ಆದೇಶವನ್ನು ರದ್ದುಪಡಿಸಬೇಕು. ಇಲ್ಲವಾದರೆ, ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕ ಬಿ.ಪಿ.ಹರೀಶ್ ಅವರು ಧ್ವನಿ ಎತ್ತಲಿದ್ದಾರೆ’ ಎಂದು ಹೇಳಿದರು. </p>.<p>ಮುಖಂಡರಾದ ಅಣಬೇರು ಜೀವನಮೂರ್ತಿ, ವಿಜಯಕುಮಾರ, ರಾಜನಹಳ್ಳಿ ಶಿವಕುಮಾರ್, ಟಿಂಕರ್ ಮಂಜಣ್ಣ, ಕಿಶೋರಕುಮಾರ, ಗೋವಿಂದರಾಜ್, ಶಂಕರಗೌಡ ಇನ್ನಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>