ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಧೂಡಾ ನಿವೇಶನಕ್ಕೆ ಕೊನೇ ದಿನ ಅರ್ಜಿಗಳ ಮಹಾಪೂರ

Last Updated 5 ಸೆಪ್ಟೆಂಬರ್ 2021, 6:20 IST
ಅಕ್ಷರ ಗಾತ್ರ

ದಾವಣಗೆರೆ: ಕುಂದವಾಡದಲ್ಲಿ ಹೊಸ ಬಡಾವಣೆ ನಿರ್ಮಿಸಿ ನಿವೇಶನ ಹಂಚಲು ಕರೆಯಲಾಗಿದ್ದ ಅರ್ಜಿ ಸಲ್ಲಿಕೆಯ ಕೊನೇ ದಿನವಾದ ಶನಿವಾರ ಅರ್ಜಿ ಸಲ್ಲಿಸಲು ಜನರು ಮುಗಿಬಿದ್ದಿದ್ದರು. ರಾತ್ರಿ 8 ಗಂಟೆಯ ವರೆಗೆ ಅರ್ಜಿ ಸ್ವೀಕಾರ ನಡೆಯಿತು.

ಆ.11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿತ್ತು. ಆ.26ಕ್ಕೆ ಮುಗಿಯಬೇಕಿತ್ತು. ದಿನೇ ದಿನೇ ಅರ್ಜಿ ಸಲ್ಲಿಸುವವರ ಸರತಿ ಸಾಲು ಉದ್ದವಾಗುತ್ತಾ ಹೋಗಿದ್ದರಿಂದ ಸೆ.4ರ ವರೆಗೆ ಅವಧಿ ವಿಸ್ತರಿಸಲಾಗಿತ್ತು. ಕೊನೇ ದಿನವಾದ ಶನಿವಾರ 1,500ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದರು.

‘ಶನಿವಾರ ಅರ್ಜಿ ಸಲ್ಲಿಸಲು ಬಂದ ಯಾರನ್ನೂ ವಾಪಸ್‌ ಕಳುಹಿಸದೇ ಕೆಲಸ ಮಾಡಿದ್ದೇವೆ. ಒಟ್ಟು ಅರ್ಜಿಗಳ ಲೆಕ್ಕ ಸೋಮವಾರ ಸಿಗಲಿದೆ’ ಎಂದು ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಬಿ.ಟಿ. ಕುಮಾರಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT