ನಗರದ ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಲ್ಲಿ ಸೋಮವಾರ ₹ 22 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ನಾಡಬಂದ್ ಷಾವಲಿ ದರ್ಗಾ ಎದುರಿನ ರಸ್ತೆ ಅಭಿವೃದ್ಧಿಗೆ ಬಿ.ಪಿ.ಹರೀಶ್ ಅಡ್ಡಿಯಾಗಿರುವುದು ಗೊತ್ತಿದ್ದರೂ ಶಿವಶಂಕರ್ ಅಲ್ಪಸಂಖ್ಯಾತರ ಓಲೈಕೆಗಾಗಿ ಮಗುವನ್ನೂ ಚಿವುಟುತ್ತಾ, ತೊಟ್ಟಿಲನ್ನೂ ತೂಗುತ್ತಿದ್ದಾರೆ’ ಎಂದು ಆರೋಪಿಸಿದರು.