<p><strong>ಹರಿಹರ</strong>: ಮಗು ಚಿವುಟಿ, ತೊಟ್ಟಿಲು ತೂಗುವುದು ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಅವರ ಕಾಯಕವಾಗಿದೆ ಎಂದು ಶಾಸಕ ಎಸ್.ರಾಮಪ್ಪ ಟೀಕಿಸಿದರು.</p>.<p>ನಗರದ ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಲ್ಲಿ ಸೋಮವಾರ ₹ 22 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ನಾಡಬಂದ್ ಷಾವಲಿ ದರ್ಗಾ ಎದುರಿನ ರಸ್ತೆ ಅಭಿವೃದ್ಧಿಗೆ ಬಿ.ಪಿ.ಹರೀಶ್ ಅಡ್ಡಿಯಾಗಿರುವುದು ಗೊತ್ತಿದ್ದರೂ ಶಿವಶಂಕರ್ ಅಲ್ಪಸಂಖ್ಯಾತರ ಓಲೈಕೆಗಾಗಿ ಮಗುವನ್ನೂ ಚಿವುಟುತ್ತಾ, ತೊಟ್ಟಿಲನ್ನೂ ತೂಗುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಎಚ್.ಎಸ್.ಶಿವಶಂಕರ್ ಮತ್ತು ಬಿ.ಪಿ.ಹರೀಶ್ ಏನೆಂದು ತಾಲ್ಲೂಕಿನ ಜನರಿಗೆ ತಿಳಿದಿದೆ. ಮುಂಬರುವ ಚುನಾವಣೆಯಲ್ಲಿ 2ನೇ, 3ನೇ ಸ್ಥಾನಗಳು ಅವರಿಗೆ ಖಾತ್ರಿಯಾಗಿವೆ. ತಾಲ್ಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ 3ನೇ ಸ್ಥಾನವೇ ಗತಿ ಎಂದರು.</p>.<p>‘ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ನಾನು ನಮ್ಮ ಪಕ್ಷದ ಮುಖಂಡರ ಮನೆಗೆ ಹೋಗದೆ ಬೇರೆಯವರ ಮನೆಗೆ ಹೋಗಬೇಕಾ? ಶಿವಶಂಕರ್ ಟಿಕೆಟಿಗಾಗಿ ದೆಹಲಿಯ ಮುಖಂಡರ ಮನೆ ಬಾಗಿಲು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ. ಕತ್ತೆ ಸತ್ತರೆ ಹಾಳು<br />ಗುಂಡಿಗೆ ಎಸೆ ಎಂಬಂತೆ, ತಾಲ್ಲೂಕಿನಲ್ಲಿ ಜೆಡಿಎಸ್ ಸ್ಥಿತಿ ಇದೆ. ಅವರನ್ನು ಬಿಟ್ಟರೆ ಜೆಡಿಎಸ್ಗೆ ಗತಿಯಿಲ್ಲ. ಇವರಿಗೆ ಜೆಡಿಎಸ್ ಪಕ್ಷ ಬಿಟ್ಟರೆ ಬೇರೆ ಗತಿ ಇಲ್ಲ ಎಂಬಂತಾಗಿದೆ’ ಎಂದು ತಿರುಗೇಟು ನೀಡಿದರು. </p>.<p>ನಾನು ತಾಲ್ಲೂಕಿಗೆ ಎಷ್ಟು ಅನುದಾನ ತಂದಿದ್ದೇನೆ ಎಂದು ಶೀಘ್ರದಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇನೆ. ಮಾಜಿ ಶಾಸಕ ಬಿ.ಪಿ. ಹರೀಶ್ ಮತ್ತು ಎಚ್.ಎಸ್.ಶಿವಶಂಕರ್ ತಮ್ಮ ಅವಧಿಯಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದು ಪಟ್ಟಿ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದರು.</p>.<p>ವಾರ್ಡ್ ಸದಸ್ಯ ಶಂಕರ್ ಖಟಾವ್ಕರ್ ಮಾತನಾಡಿದರು. ನಗರಸಭಾಧ್ಯಕ್ಷೆ ಶಾಹೀನಾ ದಾದಾಪೀರ್ ಹಾಗೂ ನಗರಸಭೆ ಸದಸ್ಯರು, ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ಮಗು ಚಿವುಟಿ, ತೊಟ್ಟಿಲು ತೂಗುವುದು ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಅವರ ಕಾಯಕವಾಗಿದೆ ಎಂದು ಶಾಸಕ ಎಸ್.ರಾಮಪ್ಪ ಟೀಕಿಸಿದರು.</p>.<p>ನಗರದ ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಲ್ಲಿ ಸೋಮವಾರ ₹ 22 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ನಾಡಬಂದ್ ಷಾವಲಿ ದರ್ಗಾ ಎದುರಿನ ರಸ್ತೆ ಅಭಿವೃದ್ಧಿಗೆ ಬಿ.ಪಿ.ಹರೀಶ್ ಅಡ್ಡಿಯಾಗಿರುವುದು ಗೊತ್ತಿದ್ದರೂ ಶಿವಶಂಕರ್ ಅಲ್ಪಸಂಖ್ಯಾತರ ಓಲೈಕೆಗಾಗಿ ಮಗುವನ್ನೂ ಚಿವುಟುತ್ತಾ, ತೊಟ್ಟಿಲನ್ನೂ ತೂಗುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಎಚ್.ಎಸ್.ಶಿವಶಂಕರ್ ಮತ್ತು ಬಿ.ಪಿ.ಹರೀಶ್ ಏನೆಂದು ತಾಲ್ಲೂಕಿನ ಜನರಿಗೆ ತಿಳಿದಿದೆ. ಮುಂಬರುವ ಚುನಾವಣೆಯಲ್ಲಿ 2ನೇ, 3ನೇ ಸ್ಥಾನಗಳು ಅವರಿಗೆ ಖಾತ್ರಿಯಾಗಿವೆ. ತಾಲ್ಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ 3ನೇ ಸ್ಥಾನವೇ ಗತಿ ಎಂದರು.</p>.<p>‘ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ನಾನು ನಮ್ಮ ಪಕ್ಷದ ಮುಖಂಡರ ಮನೆಗೆ ಹೋಗದೆ ಬೇರೆಯವರ ಮನೆಗೆ ಹೋಗಬೇಕಾ? ಶಿವಶಂಕರ್ ಟಿಕೆಟಿಗಾಗಿ ದೆಹಲಿಯ ಮುಖಂಡರ ಮನೆ ಬಾಗಿಲು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ. ಕತ್ತೆ ಸತ್ತರೆ ಹಾಳು<br />ಗುಂಡಿಗೆ ಎಸೆ ಎಂಬಂತೆ, ತಾಲ್ಲೂಕಿನಲ್ಲಿ ಜೆಡಿಎಸ್ ಸ್ಥಿತಿ ಇದೆ. ಅವರನ್ನು ಬಿಟ್ಟರೆ ಜೆಡಿಎಸ್ಗೆ ಗತಿಯಿಲ್ಲ. ಇವರಿಗೆ ಜೆಡಿಎಸ್ ಪಕ್ಷ ಬಿಟ್ಟರೆ ಬೇರೆ ಗತಿ ಇಲ್ಲ ಎಂಬಂತಾಗಿದೆ’ ಎಂದು ತಿರುಗೇಟು ನೀಡಿದರು. </p>.<p>ನಾನು ತಾಲ್ಲೂಕಿಗೆ ಎಷ್ಟು ಅನುದಾನ ತಂದಿದ್ದೇನೆ ಎಂದು ಶೀಘ್ರದಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇನೆ. ಮಾಜಿ ಶಾಸಕ ಬಿ.ಪಿ. ಹರೀಶ್ ಮತ್ತು ಎಚ್.ಎಸ್.ಶಿವಶಂಕರ್ ತಮ್ಮ ಅವಧಿಯಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದು ಪಟ್ಟಿ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದರು.</p>.<p>ವಾರ್ಡ್ ಸದಸ್ಯ ಶಂಕರ್ ಖಟಾವ್ಕರ್ ಮಾತನಾಡಿದರು. ನಗರಸಭಾಧ್ಯಕ್ಷೆ ಶಾಹೀನಾ ದಾದಾಪೀರ್ ಹಾಗೂ ನಗರಸಭೆ ಸದಸ್ಯರು, ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>