ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿರುದ್ಧ ಕಾನೂನು ಹೋರಾಟ: ಗಂಗಾಧರ ಕುಲಕರ್ಣಿ

ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ
Last Updated 5 ಮಾರ್ಚ್ 2021, 15:18 IST
ಅಕ್ಷರ ಗಾತ್ರ

ದಾವಣಗೆರೆ: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ವಿರುದ್ಧ ಏಪ್ರಿಲ್‌ ಕೊನೆಯ ವಾರದಲ್ಲಿ ಕಾನೂನು ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಬಾರದು ಎಂದು ಸುಪ್ರೀಂ ಕೋರ್ಟ್‌ ಕೂಡ ಆದೇಶ ನೀಡಿದೆ. ಆದರೂ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದೆ. ಧ್ವನಿವರ್ಧಕದ ಶಬ್ದ ಇಷ್ಟೇ ಡೆಸಿಬಲ್‌ ಇರಬೇಕು ಎಂಬ ನಿಯಮ ಕೂಡ ಇದೆ. ಆದರೆ, ಯಾವುದೂ ಪಾಲನೆಯಾಗುತ್ತಿಲ್ಲ. ಆಸ್ಪತ್ರೆ, ಶಾಲಾ–ಕಾಲೇಜುಗಳ ಸಮೀಪದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ವಿರುದ್ಧ ರಾಜ್ಯದಾದ್ಯಂತ ದೂರು ದಾಖಲಿಸುವ ಆಂದೋಲನ ನಡೆಸುತ್ತೇವೆ’ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್‌ ತೀರ್ಪಿನ ನಂತರವೂ ‘ವಿವಾದಿತ ರಾಮಮಂದಿರ’ ಎಂಬ ಪದ ಬಳಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧವೂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದ ಅವರು, ‘ಆರ್‌ಎಸ್‌ಎಸ್‌ ಸಂಘಟನೆಯನ್ನು ಪಾಕಿಸ್ತಾನದ ಮದರಸಾಗಳಿಗೆ ಹೋಲಿಕೆ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆ ಖಂಡನೀಯ. ಆರ್‌ಎಸ್‌ಎಸ್‌ ಏನು ಮಾಡುತ್ತದೆ; ಪಾಕಿಸ್ತಾನದ ಮದರಸಾಗಳು ಏನು ಮಾಡುತ್ತವೆ ಎಂಬ ಕನಿಷ್ಠ ಜ್ಞಾನವೂ ಅವರಿಗೆ ಇಲ್ಲ. ಅವರು ತಕ್ಷಣ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT