ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಕೂಡ ಆದೇಶ ನೀಡಿದೆ. ಆದರೂ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದೆ. ಧ್ವನಿವರ್ಧಕದ ಶಬ್ದ ಇಷ್ಟೇ ಡೆಸಿಬಲ್ ಇರಬೇಕು ಎಂಬ ನಿಯಮ ಕೂಡ ಇದೆ. ಆದರೆ, ಯಾವುದೂ ಪಾಲನೆಯಾಗುತ್ತಿಲ್ಲ. ಆಸ್ಪತ್ರೆ, ಶಾಲಾ–ಕಾಲೇಜುಗಳ ಸಮೀಪದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ವಿರುದ್ಧ ರಾಜ್ಯದಾದ್ಯಂತ ದೂರು ದಾಖಲಿಸುವ ಆಂದೋಲನ ನಡೆಸುತ್ತೇವೆ’ ಎಂದು ತಿಳಿಸಿದರು.