<p><strong>ಹೊನ್ನಾಳಿ</strong>:ತಾಲ್ಲೂಕಿನ ಎಚ್. ಕಡದಕಟ್ಟೆ ಗ್ರಾಮದ ಜೋಗುಂಡಿ ಹಳ್ಳದ ಬಳಿ ಇರುವ ಶಿಕ್ಷಕ ಶೇಖರಪ್ಪ ಅವರ ಹೊಲದಲ್ಲಿ ಭಾನುವಾರ ಮೇಕೆ ಮೇಲೆ ಚಿರತೆ ದಾಳಿ ನಡೆಸಿದೆ.</p>.<p>ಚಿರತೆ ದಾಳಿಯಿಂದ ಮೇಕೆ ಮೃತಪಟ್ಟಿದ್ದು,₹ 15 ಸಾವಿರ ನಷ್ಟ ಆಗಿದೆ ಎಂದುಎಚ್. ಕಡದಕಟ್ಟೆ ಗ್ರಾಮದ ರೈತ ಬಸಪ್ಪ ತಿಳಿಸಿದ್ದಾರೆ.</p>.<p>ಚಿರತೆ ದಾಳಿ ಮಾಡುತ್ತಿದ್ದಂತೆ ಅಕ್ಕ-ಪಕ್ಕದ ಜಮೀನುಗಳಲ್ಲಿದ್ದ ರೈತರು ಕೂಗಿದ್ದರಿಂದ ಚಿರತೆ ಓಡಿಹೋಗಿದೆ.</p>.<p>ಉಪ ವಲಯ ಅರಣ್ಯಾಧಿಕಾರಿ ಜಿ.ಜಿ. ಶಿವಯೋಗಿ ಅವರ ಸೂಚನೆಯ ಮೇರೆಗೆ ಅರಣ್ಯಾಧಿಕಾರಿ ಪ್ರಭಾಕರ್ ಗ್ರಾಮಕ್ಕೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.</p>.<p>ಚಿರತೆ ದಾಳಿಯಿಂದಾಗಿ ಎಚ್. ಕಡದಕಟ್ಟೆ ಸೇರಿ ಸುತ್ತ-ಮುತ್ತಲಿನ ಗ್ರಾಮಗಳ ಜನರು ಆತಂಕಗೊಂಡಿದ್ದು, ಶೀಘ್ರ ಚಿರತೆ ಸೆರೆ ಹಿಡಿಯಬೇಕು ಎಂದು ತಾಲ್ಲೂಕು ರೈತ ಸಂಘ ಹಸಿರು ಸೇನೆ ಅಧ್ಯಕ್ಷ ಎಂ.ಎಸ್. ಜಗದೀಶ್ ಆಗ್ರಹಿಸಿದ್ದಾರೆ.</p>.<p>ಎರಡು ತಿಂಗಳ ಹಿಂದೆ ತಾಲೂಕಿನ ಅರಬಗಟ್ಟೆ, ಸೊರಟೂರು, ಎಚ್. ಕಡದಕಟ್ಟೆ ಮತ್ತು ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ತೀರ್ಥರಾಮೇಶ್ವರ, ಆರುಂಡಿ, ಮಾದನಬಾವಿ ಮತ್ತಿತರ ಗ್ರಾಮಗಳಲ್ಲಿ ಒಂದು ಚಿರತೆ ಹಾಗೂ ಎರಡು ಮರಿಗಳು ಸಂಚರಿಸುತ್ತಾ ಜನರಲ್ಲಿ ಭೀತಿ ಹುಟ್ಟಿಸಿದ್ದವು. ಅರಣ್ಯಾಧಿಕಾರಿಗಳು ಆಯಕಟ್ಟಿನ ಜಾಗಗಳಲ್ಲಿ ಬೋನುಗಳನ್ನೂ ಇರಿಸಿದ್ದರು. ಆದರೂ ಚಿರತೆಗಳು ಸೆರೆಯಾಗಿರಲಿಲ್ಲ. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>:ತಾಲ್ಲೂಕಿನ ಎಚ್. ಕಡದಕಟ್ಟೆ ಗ್ರಾಮದ ಜೋಗುಂಡಿ ಹಳ್ಳದ ಬಳಿ ಇರುವ ಶಿಕ್ಷಕ ಶೇಖರಪ್ಪ ಅವರ ಹೊಲದಲ್ಲಿ ಭಾನುವಾರ ಮೇಕೆ ಮೇಲೆ ಚಿರತೆ ದಾಳಿ ನಡೆಸಿದೆ.</p>.<p>ಚಿರತೆ ದಾಳಿಯಿಂದ ಮೇಕೆ ಮೃತಪಟ್ಟಿದ್ದು,₹ 15 ಸಾವಿರ ನಷ್ಟ ಆಗಿದೆ ಎಂದುಎಚ್. ಕಡದಕಟ್ಟೆ ಗ್ರಾಮದ ರೈತ ಬಸಪ್ಪ ತಿಳಿಸಿದ್ದಾರೆ.</p>.<p>ಚಿರತೆ ದಾಳಿ ಮಾಡುತ್ತಿದ್ದಂತೆ ಅಕ್ಕ-ಪಕ್ಕದ ಜಮೀನುಗಳಲ್ಲಿದ್ದ ರೈತರು ಕೂಗಿದ್ದರಿಂದ ಚಿರತೆ ಓಡಿಹೋಗಿದೆ.</p>.<p>ಉಪ ವಲಯ ಅರಣ್ಯಾಧಿಕಾರಿ ಜಿ.ಜಿ. ಶಿವಯೋಗಿ ಅವರ ಸೂಚನೆಯ ಮೇರೆಗೆ ಅರಣ್ಯಾಧಿಕಾರಿ ಪ್ರಭಾಕರ್ ಗ್ರಾಮಕ್ಕೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.</p>.<p>ಚಿರತೆ ದಾಳಿಯಿಂದಾಗಿ ಎಚ್. ಕಡದಕಟ್ಟೆ ಸೇರಿ ಸುತ್ತ-ಮುತ್ತಲಿನ ಗ್ರಾಮಗಳ ಜನರು ಆತಂಕಗೊಂಡಿದ್ದು, ಶೀಘ್ರ ಚಿರತೆ ಸೆರೆ ಹಿಡಿಯಬೇಕು ಎಂದು ತಾಲ್ಲೂಕು ರೈತ ಸಂಘ ಹಸಿರು ಸೇನೆ ಅಧ್ಯಕ್ಷ ಎಂ.ಎಸ್. ಜಗದೀಶ್ ಆಗ್ರಹಿಸಿದ್ದಾರೆ.</p>.<p>ಎರಡು ತಿಂಗಳ ಹಿಂದೆ ತಾಲೂಕಿನ ಅರಬಗಟ್ಟೆ, ಸೊರಟೂರು, ಎಚ್. ಕಡದಕಟ್ಟೆ ಮತ್ತು ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ತೀರ್ಥರಾಮೇಶ್ವರ, ಆರುಂಡಿ, ಮಾದನಬಾವಿ ಮತ್ತಿತರ ಗ್ರಾಮಗಳಲ್ಲಿ ಒಂದು ಚಿರತೆ ಹಾಗೂ ಎರಡು ಮರಿಗಳು ಸಂಚರಿಸುತ್ತಾ ಜನರಲ್ಲಿ ಭೀತಿ ಹುಟ್ಟಿಸಿದ್ದವು. ಅರಣ್ಯಾಧಿಕಾರಿಗಳು ಆಯಕಟ್ಟಿನ ಜಾಗಗಳಲ್ಲಿ ಬೋನುಗಳನ್ನೂ ಇರಿಸಿದ್ದರು. ಆದರೂ ಚಿರತೆಗಳು ಸೆರೆಯಾಗಿರಲಿಲ್ಲ. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>