ಎರಡು ತಿಂಗಳ ಹಿಂದೆ ತಾಲೂಕಿನ ಅರಬಗಟ್ಟೆ, ಸೊರಟೂರು, ಎಚ್. ಕಡದಕಟ್ಟೆ ಮತ್ತು ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ತೀರ್ಥರಾಮೇಶ್ವರ, ಆರುಂಡಿ, ಮಾದನಬಾವಿ ಮತ್ತಿತರ ಗ್ರಾಮಗಳಲ್ಲಿ ಒಂದು ಚಿರತೆ ಹಾಗೂ ಎರಡು ಮರಿಗಳು ಸಂಚರಿಸುತ್ತಾ ಜನರಲ್ಲಿ ಭೀತಿ ಹುಟ್ಟಿಸಿದ್ದವು. ಅರಣ್ಯಾಧಿಕಾರಿಗಳು ಆಯಕಟ್ಟಿನ ಜಾಗಗಳಲ್ಲಿ ಬೋನುಗಳನ್ನೂ ಇರಿಸಿದ್ದರು. ಆದರೂ ಚಿರತೆಗಳು ಸೆರೆಯಾಗಿರಲಿಲ್ಲ. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ.