ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ಜಿ.ಶಿವಕುಮಾರ್ ಮಾತನಾಡಿದರು. ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಉಪಮೇಯರ್ ಗಾಯಿತ್ರಿಬಾಯಿ ಖಂಡೋಜಿರಾವ್, ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಸೋಗಿ ಶಾಂತಕುಮಾರ್, ಎ.ನಾಗರಾಜ್ ಇದ್ದರು. ಬೆಳಿಗ್ಗೆ ಮೆರವಣಿಗೆಯನ್ನು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಾಮದೇವಪ್ಪ ಉದ್ಘಾಟಿಸಿದರು. ಪತ್ರಕರ್ತ ನಾಗರಾಜ್ ಬಡದಾಳ್ ಇತರರು ಇದ್ದರು.