ಮುಖ್ಯ ಅತಿಥಿಗಳಾಗಿದ್ದ ಹಿರಿಯ ನ್ಯಾಯವಾದಿ ಎಲ್.ಎಚ್. ಅರುಣ್ಕುಮಾರ್, ‘ಕೊರೊನಾದ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಜೀವನ ಸಂಕಷ್ಟದ ಸ್ಥಿತಿಗೆ ತಲುಪಿತ್ತು. ಇಂತಹ ಸಂದರ್ಭದಲ್ಲಿ ದಾನಿಗಳು, ಸಂಘ-ಸಂಸ್ಥೆಗಳು ಆಹಾರ ಧಾನ್ಯ, ಇತರ ವಸ್ತುಗಳನ್ನು ನೀಡುವ ಮೂಲಕ ಸಹಾಯ ಹಸ್ತ ಚಾಚಿದರು. ಇದನ್ನು ಮನಗಂಡ ಮೇಲೆ ಚುನಾಯಿತ ಸರ್ಕಾರಗಳು ನೆರವಿಗೆ ಬಂದವು. ಯಾವುದೇ ಸಂದರ್ಭದಲ್ಲಿ ಹಸಿದವರ ನೆರವಿಗೆ ಬರಬೇಕಾದುದ್ದು ಸರ್ಕಾರಗಳ ಕರ್ತವ್ಯ’ ಎಂದು ಹೇಳಿದರು.