ಪ್ರತಿಭಟನೆ, ಹೋರಾಟ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಮೇಲೆ ಮನಬಂದಂತೆ ಮಾತನಾಡಿದ್ದಾರೆ. ಇಂತಹ ಗೂಂಡಾವರ್ತನೆಯಿಂದ ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವುದು ಹೇಗೆ ಎಂದು ಪ್ರಶ್ನಿಸಿದರು.
ಮೋದಿ ಅಧಿಕಾರಕ್ಕೆ ಬರುವ ಮುನ್ನ ಹಲವಾರು ಭರವಸೆಗಳನ್ನು ನೀಡಿದ್ದರು. ‘ಇಡೀ ದೇಶದ ಚಿತ್ರಣವನ್ನು ಬದಲಾಯಿಸುತ್ತೇನೆ’ ಎಂದಿದ್ದರು. ಆದರೆ ನೋಟು ರದ್ದತಿ, ಜಿಎಸ್ಟಿ ಹೊರೆ, ಉದ್ಯಮಿಗಳ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿರುವುದೇ ಇವರ ಸಾಧನೆ ಎಂದು ಕುಟುಕಿದರು.