ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿಗಣತಿ ವರದಿ ಬಿಡುಗಡೆಯಾಗಲಿ, ಆಮೇಲೆ ನೋಡೋಣ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Published 26 ನವೆಂಬರ್ 2023, 20:49 IST
Last Updated 26 ನವೆಂಬರ್ 2023, 20:49 IST
ಅಕ್ಷರ ಗಾತ್ರ

ದಾವಣಗೆರೆ: ‘ಜಾತಿಗಣತಿಗೆ ಸಂಬಂಧಿಸಿದಂತೆ ಎಚ್‌.ಕಾಂತರಾಜ ಆಯೋಗದ ವರದಿ ಬಿಡುಗಡೆಯಾಗದೇ ಏನೂ ಮಾತನಾಡುವುದು ಬೇಡ. ಒಮ್ಮೆ ವರದಿ ಬಿಡುಗಡೆ ಆಗಲಿ ಅಮೇಲೆ ನೋಡೋಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಜಾತಿಗಣತಿ ವರದಿಯಲ್ಲಿ ಏನು ಇದೆ ಎಂಬುದು ಬಿಡುಗಡೆಯಾದ ಬಳಿಕವೇ ಗೊತ್ತಾಗಬೇಕು. ಶನಿವಾರ ನಡೆದ ವೀರಶೈವ ಮಹಾಸಭಾದ ಸಭೆಯಲ್ಲಿ ಈ ಕುರಿತು ವಿರೋಧ ವ್ಯಕ್ತವಾಗಿದೆ. ಈಗ ಒಬ್ಬೊಬ್ಬರು ಒಂದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗ, ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ವರದಿ ಬಿಡುಗಡೆ ಆದ ನಂತರ ಸತ್ಯಾಂಶ ಗೊತ್ತಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT