ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಜಾತಿಗಣತಿ ವರದಿಯಲ್ಲಿ ಏನು ಇದೆ ಎಂಬುದು ಬಿಡುಗಡೆಯಾದ ಬಳಿಕವೇ ಗೊತ್ತಾಗಬೇಕು. ಶನಿವಾರ ನಡೆದ ವೀರಶೈವ ಮಹಾಸಭಾದ ಸಭೆಯಲ್ಲಿ ಈ ಕುರಿತು ವಿರೋಧ ವ್ಯಕ್ತವಾಗಿದೆ. ಈಗ ಒಬ್ಬೊಬ್ಬರು ಒಂದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗ, ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ವರದಿ ಬಿಡುಗಡೆ ಆದ ನಂತರ ಸತ್ಯಾಂಶ ಗೊತ್ತಾಗಲಿದೆ’ ಎಂದರು.