ಇಂದಿನ ಮಕ್ಕಳು ಮೊಬೈಲ್ ಹಾಗೂ ಟಿ.ವಿ.ಗೆ ಅಂಟಿಕೊಂಡಿದ್ದಾರೆ. ರಂಗಭೂಮಿ ಚಟುವಟಿಕೆ ಮೂಲಕ ಮಕ್ಕಳಲ್ಲಿ ಶಿಸ್ತನ್ನು ಬೆಳೆಸಬಹುದು. ಅವರು ಮಾನಸಿಕವಾಗಿ ಗಟ್ಟಿಗೊಳ್ಳುವಂತೆ ಮಾಡಬಹುದು. ಮಕ್ಕಳಿಗೆ ಬಾಲ್ಯದಿಂದಲೇ ರಂಗಭೂಮಿಯನ್ನು ಪರಿಚಯಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕಲೆ, ಸಾಹಿತ್ಯ, ಜಾನಪದ ಹಾಗೂ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡುವಂತೆ ಪೋಷಕರು ಮಾಡಬೇಕು ಎಂದು ತಿಳಿಸಿದರು.