ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಯಾವುದೇ ಆಮಿಷಕ್ಕೆ ಹೋಗುವ ಜಾಯಮಾನದವರಲ್ಲ. ಇದು ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಗೊತ್ತಿದ್ದೂ ಸುಳ್ಳು ಮಾತನಾಡಿದರೆ ಅದಕ್ಕೇನು ಅನ್ನಬೇಕು. ನಾವು ಸ್ವಾಭಿಮಾನಕ್ಕಾಗಿ ಕಾಂಗ್ರೆಸ್ ಬಿಟ್ಟು ಬಂದವರೇ ಹೊರತು ರಾಜಕಾರಣಕ್ಕಾಗಿ ಅಲ್ಲ’ ಎಂದು ತಿಳಿಸಿದರು.