<p><strong>ದಾವಣಗೆರೆ:</strong> ತಿಂಗಳಿಗೆ ₹12 ಸಾವಿರ ನಿಗದಿ ಮಾಡಬೇಕು ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಮಾಸ್ಕ್, ಸ್ಯಾನಿಟೈಜರ್, ಗ್ಲೌಸ್ಗಳನ್ನು ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಬುಧವಾರ ನಗರದ ಮುಖ್ಯ ಅಂಚೆ ಕಚೇರಿ ಬಳಿ ಪತ್ರ ಚಳವಳಿ ನಡೆಸಿದರು.</p>.<p>ಧರಣಿ 6ನೇ ದಿನವೂ ಮುಂದುವರೆದಿದ್ದು, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಂಚೆ ಪತ್ರಗಳಲ್ಲಿ ತಮ್ಮ ಬೇಡಿಕೆಗಳ ಪಟ್ಟಿ ಮಾಡಿ ಮುಖ್ಯಮಂತ್ರಿಗೆ ರವಾನಿಸಿದರು.</p>.<p>‘ಆರೋಗ್ಯ ಇಲಾಖೆಯ ವಿವಿಧ ಆರೋಗ್ಯ ಕಾರ್ಯಕ್ರಮಗಳಲ್ಲಿ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಬಾಣಂತಿ ಮತ್ತು ಮಕ್ಕಳ ಆರೈಕೆಯಲ್ಲಿ ಮುತುವರ್ಜಿ ವಹಿಸುತ್ತಿದ್ದಾರೆ. ಆಶಾಗಳ ಸೇವೆಯಿಂದಾಗಿ ತಾಯಿ ಮತ್ತು ಶಿಶುಮರಣ ಸಂಖ್ಯೆಯು ಕಡಿಮೆಯಾಗಿದೆ. ನಾಲ್ಕು ತಿಂಗಳಿಂದ ಕೋವಿಡ್-19ರ ಸರ್ವೆ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಅವರಿಗೆ ಗೌರವಯುತ ಜೀವನ ನಡೆಸಲು ಬೇಕಾದ ಕನಿಷ್ಠ ಸಂಭಾವನೆ ನೀಡುತ್ತಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಜೀವನಕ್ಕೆ ಯೋಗ್ಯ ವೇತನ, ಗೌರವಧನ ನೀಡದೇ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರು ಎಂದು ಹೊಗಳಿ, ಹೂಮಳೆ ಸುರಿಸಿ, ಶಾಲು ಹಾಕಿ ಸನ್ಮಾನಿಸಿ ಪುಕ್ಕಟೆಯಾಗಿ ಹಗಲು ರಾತ್ರಿ ಗಾಣದೆತ್ತಿನಂತೆ ದುಡಿಸಿಕೊಳ್ಳುತ್ತಿರುವುದು ಖಂಡನೀಯ’ ಎಂದರು.</p>.<p>‘16 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ. ಗುರುವಾರ ಆಶಾ ಕಾರ್ಯಕರ್ತೆಯರು ಕುಟುಂಬದ ಸದಸ್ಯರ ಜೊತೆಯಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದು ಎಚ್ಚರಿಸಿದ್ದಾರೆ.</p>.<p>ಎ.ನಾಗರತ್ನ, ಶಕುಂತಲಾ, ರುಕ್ಕಮ್ಮ, ಮಹಾದೇವಿ, ರೆಖಾ, ಲಕ್ಷ್ಮೀಬಾಯಿ, ಭಾರತಿ, ಪುಷ್ಪ, ಶೀಲಾ, ಸರ್ಮಮಂಗಳಾ, ನಾಗವೇಣಿ, ತಿಪ್ಪೇಸ್ವಾಮಿ ಅಣಬೇರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ತಿಂಗಳಿಗೆ ₹12 ಸಾವಿರ ನಿಗದಿ ಮಾಡಬೇಕು ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಮಾಸ್ಕ್, ಸ್ಯಾನಿಟೈಜರ್, ಗ್ಲೌಸ್ಗಳನ್ನು ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಬುಧವಾರ ನಗರದ ಮುಖ್ಯ ಅಂಚೆ ಕಚೇರಿ ಬಳಿ ಪತ್ರ ಚಳವಳಿ ನಡೆಸಿದರು.</p>.<p>ಧರಣಿ 6ನೇ ದಿನವೂ ಮುಂದುವರೆದಿದ್ದು, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಂಚೆ ಪತ್ರಗಳಲ್ಲಿ ತಮ್ಮ ಬೇಡಿಕೆಗಳ ಪಟ್ಟಿ ಮಾಡಿ ಮುಖ್ಯಮಂತ್ರಿಗೆ ರವಾನಿಸಿದರು.</p>.<p>‘ಆರೋಗ್ಯ ಇಲಾಖೆಯ ವಿವಿಧ ಆರೋಗ್ಯ ಕಾರ್ಯಕ್ರಮಗಳಲ್ಲಿ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಬಾಣಂತಿ ಮತ್ತು ಮಕ್ಕಳ ಆರೈಕೆಯಲ್ಲಿ ಮುತುವರ್ಜಿ ವಹಿಸುತ್ತಿದ್ದಾರೆ. ಆಶಾಗಳ ಸೇವೆಯಿಂದಾಗಿ ತಾಯಿ ಮತ್ತು ಶಿಶುಮರಣ ಸಂಖ್ಯೆಯು ಕಡಿಮೆಯಾಗಿದೆ. ನಾಲ್ಕು ತಿಂಗಳಿಂದ ಕೋವಿಡ್-19ರ ಸರ್ವೆ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಅವರಿಗೆ ಗೌರವಯುತ ಜೀವನ ನಡೆಸಲು ಬೇಕಾದ ಕನಿಷ್ಠ ಸಂಭಾವನೆ ನೀಡುತ್ತಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಜೀವನಕ್ಕೆ ಯೋಗ್ಯ ವೇತನ, ಗೌರವಧನ ನೀಡದೇ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರು ಎಂದು ಹೊಗಳಿ, ಹೂಮಳೆ ಸುರಿಸಿ, ಶಾಲು ಹಾಕಿ ಸನ್ಮಾನಿಸಿ ಪುಕ್ಕಟೆಯಾಗಿ ಹಗಲು ರಾತ್ರಿ ಗಾಣದೆತ್ತಿನಂತೆ ದುಡಿಸಿಕೊಳ್ಳುತ್ತಿರುವುದು ಖಂಡನೀಯ’ ಎಂದರು.</p>.<p>‘16 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ. ಗುರುವಾರ ಆಶಾ ಕಾರ್ಯಕರ್ತೆಯರು ಕುಟುಂಬದ ಸದಸ್ಯರ ಜೊತೆಯಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದು ಎಚ್ಚರಿಸಿದ್ದಾರೆ.</p>.<p>ಎ.ನಾಗರತ್ನ, ಶಕುಂತಲಾ, ರುಕ್ಕಮ್ಮ, ಮಹಾದೇವಿ, ರೆಖಾ, ಲಕ್ಷ್ಮೀಬಾಯಿ, ಭಾರತಿ, ಪುಷ್ಪ, ಶೀಲಾ, ಸರ್ಮಮಂಗಳಾ, ನಾಗವೇಣಿ, ತಿಪ್ಪೇಸ್ವಾಮಿ ಅಣಬೇರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>