<p><strong>ಸಾಸ್ವೆಹಳ್ಳಿ</strong>: ಸಮೀಪದ ಲಿಂಗಾಪುರ ಗ್ರಾಮದ ಹೊರವಲಯದಲ್ಲಿರುವ ಅಶ್ವತ್ಥ ಮರದ ಕೆಳಗಿನ ಬ್ರಹ್ಮದೇವರ ಕಟ್ಟೆಯಲ್ಲಿ ವಾರ್ಷಿಕ ವಿಶೇಷ ಪೂಜೆ ಹಾಗೂ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು.</p>.<p>ಫಾಲ್ಗುಣ ಮಾಸದ ಮಹಾಶಿವರಾತ್ರಿ ನಂತರ ಬರುವ ಅಮಾವಾಸ್ಯೆಯ ಮೊದಲ ಶನಿವಾರ ಮತ್ತು ಭಾನುವಾರದಂದು ಗ್ರಾಮಸ್ಥರೆಲ್ಲರೂ ಸೇರಿ ಈ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.</p>.<p>ಶನಿವಾರ ಹನುಮಂತ ದೇವರ ದಿನವಾದ್ದರಿಂದ, ಗ್ರಾಮ ದೇವತೆ ಹನುಮಂತಪ್ಪನಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಬ್ರಹ್ಮದೇವರ ಕಟ್ಟೆಯ ಬಳಿ ಹನುಮಂತ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವುದು ಇಲ್ಲಿನ ವಾಡಿಕೆ. ಈ ಪದ್ಧತಿಯಿಂದ ಗ್ರಾಮಕ್ಕೆ ಒಳಿತಾಗುತ್ತದೆ ಎಂಬ ನಂಬಿಕೆ ಇದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ಗ್ರಾಮದ ಮಹಿಳೆಯರು ಹಾಗೂ ಮುಖಂಡರು ಕಾಲ್ನಡಿಗೆಯ ಮೂಲಕ ಕಟ್ಟೆಗೆ ತೆರಳಿ ಪೂಜೆ ಸಲ್ಲಿಸಿದರು. ಮನೆಗಳಲ್ಲಿ ತಯಾರಿಸಿದ ಹೋಳಿಗೆ, ಪಾಯಸ, ಬುತ್ತಿ ಹಾಗೂ ರೊಟ್ಟಿಗಳನ್ನು ದೇವರಿಗೆ ನೈವೇದ್ಯವಾಗಿ ಅರ್ಪಿಸಿ ಹರಿವಾಣದೊಂದಿಗೆ ಪೂಜೆ ನೆರವೇರಿಸಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.</p>.<p>ಭಾನುವಾರ ಬೆಳಿಗ್ಗೆ ಗ್ರಾಮಸ್ಥರು ಮತ್ತೆ ಕಟ್ಟೆಗೆ ತೆರಳಿ ಪಾನಕ ಬಂಡಿ ಉತ್ಸವ ಹಾಗೂ ಬಲಿಸೇವೆಯನ್ನು ನೆರವೇರಿಸಿದರು. ಮಳೆ-ಬೆಳೆ ಚೆನ್ನಾಗಿ ಆಗಲಿ ಮತ್ತು ರೈತರು ಸುಖವಾಗಿರಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು. ಅನಾದಿಕಾಲದಿಂದ ನಡೆದುಬಂದಿರುವ ಈ ಆಚರಣೆಯಲ್ಲಿ ಲಿಂಗಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ಭಕ್ತರು ಪಾಲ್ಗೊಂಡು ಹರಕೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ</strong>: ಸಮೀಪದ ಲಿಂಗಾಪುರ ಗ್ರಾಮದ ಹೊರವಲಯದಲ್ಲಿರುವ ಅಶ್ವತ್ಥ ಮರದ ಕೆಳಗಿನ ಬ್ರಹ್ಮದೇವರ ಕಟ್ಟೆಯಲ್ಲಿ ವಾರ್ಷಿಕ ವಿಶೇಷ ಪೂಜೆ ಹಾಗೂ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು.</p>.<p>ಫಾಲ್ಗುಣ ಮಾಸದ ಮಹಾಶಿವರಾತ್ರಿ ನಂತರ ಬರುವ ಅಮಾವಾಸ್ಯೆಯ ಮೊದಲ ಶನಿವಾರ ಮತ್ತು ಭಾನುವಾರದಂದು ಗ್ರಾಮಸ್ಥರೆಲ್ಲರೂ ಸೇರಿ ಈ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.</p>.<p>ಶನಿವಾರ ಹನುಮಂತ ದೇವರ ದಿನವಾದ್ದರಿಂದ, ಗ್ರಾಮ ದೇವತೆ ಹನುಮಂತಪ್ಪನಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಬ್ರಹ್ಮದೇವರ ಕಟ್ಟೆಯ ಬಳಿ ಹನುಮಂತ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವುದು ಇಲ್ಲಿನ ವಾಡಿಕೆ. ಈ ಪದ್ಧತಿಯಿಂದ ಗ್ರಾಮಕ್ಕೆ ಒಳಿತಾಗುತ್ತದೆ ಎಂಬ ನಂಬಿಕೆ ಇದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ಗ್ರಾಮದ ಮಹಿಳೆಯರು ಹಾಗೂ ಮುಖಂಡರು ಕಾಲ್ನಡಿಗೆಯ ಮೂಲಕ ಕಟ್ಟೆಗೆ ತೆರಳಿ ಪೂಜೆ ಸಲ್ಲಿಸಿದರು. ಮನೆಗಳಲ್ಲಿ ತಯಾರಿಸಿದ ಹೋಳಿಗೆ, ಪಾಯಸ, ಬುತ್ತಿ ಹಾಗೂ ರೊಟ್ಟಿಗಳನ್ನು ದೇವರಿಗೆ ನೈವೇದ್ಯವಾಗಿ ಅರ್ಪಿಸಿ ಹರಿವಾಣದೊಂದಿಗೆ ಪೂಜೆ ನೆರವೇರಿಸಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.</p>.<p>ಭಾನುವಾರ ಬೆಳಿಗ್ಗೆ ಗ್ರಾಮಸ್ಥರು ಮತ್ತೆ ಕಟ್ಟೆಗೆ ತೆರಳಿ ಪಾನಕ ಬಂಡಿ ಉತ್ಸವ ಹಾಗೂ ಬಲಿಸೇವೆಯನ್ನು ನೆರವೇರಿಸಿದರು. ಮಳೆ-ಬೆಳೆ ಚೆನ್ನಾಗಿ ಆಗಲಿ ಮತ್ತು ರೈತರು ಸುಖವಾಗಿರಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು. ಅನಾದಿಕಾಲದಿಂದ ನಡೆದುಬಂದಿರುವ ಈ ಆಚರಣೆಯಲ್ಲಿ ಲಿಂಗಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳ ಭಕ್ತರು ಪಾಲ್ಗೊಂಡು ಹರಕೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>