ಇದಕ್ಕೆ ಪ್ರತಿಯಾಗಿ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈ. ರಾಮಪ್ಪ, ‘ನಾನು ಎಲ್ಲಿಯೂ ಲಿಂಗಾಯತ–ವೀರಶೈವ ಪದವನ್ನು ಬಳಸಿಲ್ಲ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಲಾಗುತ್ತಿದೆ. ಪ್ರತಿಭಟನೆ ವೇಳೆ ಜಾತಿ ನಿಂದನೆ ಮಾಡಿದ್ದಾರೆ. ಹೀಗಾಗಿ ಅವರೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ವಾರದೊಳಗೆ ‘ಅಹಿಂದ’ ಸಮಾಜದ ಮುಖಂಡರ ಸಭೆ ಕರೆದು ಅವರ ವಿರುದ್ಧವೇ ಹೋರಾಟ ಕೈಗೊಳ್ಳಲಾಗುವುದು. ಅಹಿಂದ ಸಮಾಜದ ಶಕ್ತಿಯನ್ನು ನಾವೂ ತೋರಿಸುತ್ತೇವೆ’ ಎಂದು ಎದುರೇಟು ನೀಡಿದರು.