<p><strong>ದಾವಣಗೆರೆ:</strong> ರಾಜ್ಯದಲ್ಲಿರುವ ಎಲ್ಲರೂ ಲಿಂಗಾಯತರೇ. ವೀರಶೈವರು ಕೂಡ ನಮ್ಮವರೇ. ಅವರಲ್ಲಿ ಬಸವತತ್ವದ ಬಗ್ಗೆ ಅರಿವು ಮೂಡಿದಾಗ ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಸ್ಥಾನ ಸಿಗಲಿದೆ ಎಂದು ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ವಚನ ಸಾಹಿತ್ಯದಿಂದ ದೂರ ಸರಿದ ಪರಿಣಾಮವಾಗಿ ದಾರಿ ತಪ್ಪಿದ್ದೇವೆ. ವಚನಗಳ ಸಮೀಪಕ್ಕೆ ಬರುತ್ತಿದ್ದಂತೆ ಸರಿಯಾದ ದಾರಿ ಸಿಗಲಿದೆ. ಬಸವತತ್ವವೆಂಬ ರಾಜಮಾರ್ಗದಲ್ಲಿ ಸಾಗಲು ಸಾಧ್ಯವಾಗಲಿದೆ’ ಎಂದು ಪ್ರತಿಪಾದಿಸಿದರು.</p>.<p>‘ಜಾತಿ ಗಣತಿ, ಸಮೀಕ್ಷೆಯಲ್ಲಿ ಎಚ್ಚರ ತಪ್ಪಿದರೆ ಮುಂದಿನ ತಲೆಮಾರು ಶಾಪ ಹಾಕುವುದು ನಿಶ್ಚಿತ. ಲಿಂಗ, ರುದ್ರಾಕ್ಷಿಗಳನ್ನು ವಸ್ತಸಂಗ್ರಹಾಲಯಗಳಲ್ಲಿ ನೋಡಬೇಕಾಗುತ್ತದೆ’ ಎಂದು ನಿಜಗುಣಾನಂದ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.</p>.<p>‘ಆರ್ಥಿಕ ಕುಸಿತ, ಆಹಾರಕ್ಕೆ ಬಿಕ್ಕಟ್ಟು ಸೃಷ್ಟಿಯಾಗುವ ದಿನಗಳು ಬರಬಹುದು. ಇಂತಹ ಸಂದರ್ಭದಲ್ಲಿ ಸಮಾಜವನ್ನು ಕಾಪಾಡುವ ಶಕ್ತಿ ಇರುವುದು ಲಿಂಗಾಯತ ಧರ್ಮಕ್ಕೆ ಮಾತ್ರ. ಒಳಪಂಗಡಗಳನ್ನು ಮರೆತು ಧರ್ಮದ ಹೆಸರಿನಲ್ಲಿ ಒಗ್ಗೂಡುವ ಅಗತ್ಯವಿದೆ’ ಎಂದರು.</p>.<p>ಅಥಣಿಯ ಚನ್ನಬಸವ ಸ್ವಾಮೀಜಿ, ಪಾಂಡೋಮಟ್ಟಿಯ ಗುರುಬಸವ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಗಂಗಾಮಾತೆ, ಬಸವಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಪ್ರಭುಮಹಂತ ಸ್ವಾಮೀಜಿ, ಶಾಸಕ ಬಿ.ಪಿ. ಹರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ರಾಜ್ಯದಲ್ಲಿರುವ ಎಲ್ಲರೂ ಲಿಂಗಾಯತರೇ. ವೀರಶೈವರು ಕೂಡ ನಮ್ಮವರೇ. ಅವರಲ್ಲಿ ಬಸವತತ್ವದ ಬಗ್ಗೆ ಅರಿವು ಮೂಡಿದಾಗ ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಸ್ಥಾನ ಸಿಗಲಿದೆ ಎಂದು ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ವಚನ ಸಾಹಿತ್ಯದಿಂದ ದೂರ ಸರಿದ ಪರಿಣಾಮವಾಗಿ ದಾರಿ ತಪ್ಪಿದ್ದೇವೆ. ವಚನಗಳ ಸಮೀಪಕ್ಕೆ ಬರುತ್ತಿದ್ದಂತೆ ಸರಿಯಾದ ದಾರಿ ಸಿಗಲಿದೆ. ಬಸವತತ್ವವೆಂಬ ರಾಜಮಾರ್ಗದಲ್ಲಿ ಸಾಗಲು ಸಾಧ್ಯವಾಗಲಿದೆ’ ಎಂದು ಪ್ರತಿಪಾದಿಸಿದರು.</p>.<p>‘ಜಾತಿ ಗಣತಿ, ಸಮೀಕ್ಷೆಯಲ್ಲಿ ಎಚ್ಚರ ತಪ್ಪಿದರೆ ಮುಂದಿನ ತಲೆಮಾರು ಶಾಪ ಹಾಕುವುದು ನಿಶ್ಚಿತ. ಲಿಂಗ, ರುದ್ರಾಕ್ಷಿಗಳನ್ನು ವಸ್ತಸಂಗ್ರಹಾಲಯಗಳಲ್ಲಿ ನೋಡಬೇಕಾಗುತ್ತದೆ’ ಎಂದು ನಿಜಗುಣಾನಂದ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.</p>.<p>‘ಆರ್ಥಿಕ ಕುಸಿತ, ಆಹಾರಕ್ಕೆ ಬಿಕ್ಕಟ್ಟು ಸೃಷ್ಟಿಯಾಗುವ ದಿನಗಳು ಬರಬಹುದು. ಇಂತಹ ಸಂದರ್ಭದಲ್ಲಿ ಸಮಾಜವನ್ನು ಕಾಪಾಡುವ ಶಕ್ತಿ ಇರುವುದು ಲಿಂಗಾಯತ ಧರ್ಮಕ್ಕೆ ಮಾತ್ರ. ಒಳಪಂಗಡಗಳನ್ನು ಮರೆತು ಧರ್ಮದ ಹೆಸರಿನಲ್ಲಿ ಒಗ್ಗೂಡುವ ಅಗತ್ಯವಿದೆ’ ಎಂದರು.</p>.<p>ಅಥಣಿಯ ಚನ್ನಬಸವ ಸ್ವಾಮೀಜಿ, ಪಾಂಡೋಮಟ್ಟಿಯ ಗುರುಬಸವ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಗಂಗಾಮಾತೆ, ಬಸವಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಪ್ರಭುಮಹಂತ ಸ್ವಾಮೀಜಿ, ಶಾಸಕ ಬಿ.ಪಿ. ಹರೀಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>