ಜಗಳೂರು:ಇಲ್ಲಿನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಶನಿವಾರ ನಡೆದ ಮೆಗಾ ಲೋಕ್ ಅದಾಲತ್ನಲ್ಲಿ ಒಟ್ಟು 635 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥವಾಗಿದ್ದು, ₹ 23.46 ಲಕ್ಷ ಜಮೆಯಾಗಿದೆ.
ರಾಜಿಯಾಗಬಲ್ಲ 3 ಕ್ರಿಮಿನಲ್ ಪ್ರಕರಣಗಳು ಹಾಗೂ 3 ಚೆಕ್ ಬೌನ್ಸ್ ಪ್ರಕರಣಗಳು ಮತ್ತು ಬ್ಯಾಂಕ್ಗಳಿಗೆ ಸಂಬಂಧಿಸಿದ 2 ಪ್ರಕರಣಗಳು ಇತ್ಯರ್ಥವಾಗಿದ್ದು, ಈ ಪ್ರಕರಣಗಳಿಂದ ₹ 8.30 ಲಕ್ಷ ಜಮೆಯಾಗಿದೆ.
565 ಪ್ರಕರಣಗಳು ಹಾಗೂ ತಪ್ಪೊಪ್ಪಿಗೆಗೆ ಅವಕಾಶ ಇರುವ 39 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ನ್ಯಾಯಾಧೀಶ ಜಿ. ತಿಮ್ಮಯ್ಯ ತಿಳಿಸಿದ್ದಾರೆ.
ಕೋವಿಡ್ ಕಾರಣ ಪ್ರಕರಣಗಳ ಪಕ್ಷಗಾರರೊಂದಿಗೆ ವಿಡಿಯೊ ಸಂವಾದದ ಮೂಲಕ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಒಟ್ಟು ಸಿವಿಲ್, ಕ್ರಿಮಿನಲ್ ಹಾಗೂ ಇತರೆ ಸೇರಿ ಒಟ್ಟು 635 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥವಾಗಿದೆ ಎಂದು ಅವರು ತಿಳಿಸಿದರು.