ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆದ ದಾವಣಗೆರೆ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಾವೇಶದಲ್ಲಿ ಸೇರಿದ್ದ ಜನಸ್ತೊಮ –ಪ್ರಜಾವಾಣಿ ಚಿತ್ರ/ ಸತೀಶ್ ಬಡಿಗೇರ್
ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆದ ದಾವಣಗೆರೆ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಾವೇಶದಲ್ಲಿ ಸೇರಿದ್ದ ಜನಸ್ತೊಮ –ಪ್ರಜಾವಾಣಿ ಚಿತ್ರ/ ಸತೀಶ್ ಬಡಿಗೇರ್
ಉಪಮುಖ್ಯಮಂತ್ರ ಡಿ.ಕೆ.ಶಿವಕುಮಾರ್ ಅವರು ಎಂಬಿಎ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಬಂದು ಇಳಿದಾಗ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸ್ವಾಗತಿಸಿದರು. ಪ್ರತಿಯಾಗಿ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದರು.
ಪಕ್ಷೇತರ ಅಭ್ಯರ್ಥಿಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ
ದಾವಣಗೆರೆಯಲ್ಲಿ ‘ಇಂಡಿಯಾ’ ಹಾಗೂ ‘ಎನ್ಡಿಒ’ ಒಕ್ಕೂಟಗಳ ಅಭ್ಯರ್ಥಿಗಳ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬರು ಕಣಕ್ಕೆ ಇಳಿದಿದ್ದು ಅವರಿಗೆ ಮತ ನೀಡಬಾರದು. ಅವರಿಗೆ ಮತ ನೀಡಿದರೆ ಬಿಜೆಪಿಗೆ ವೋಟ್ ಹಾಕಿದಂತೆ ಎಂದು ಸಿದ್ದರಾಮಯ್ಯ ಹೇಳಿದರು. ‘ನನ್ನ ಮೇಲೆ ಪ್ರೀತಿ ಗೌರವ ಅಭಿಮಾನ ಇದ್ದರೆ. ನಾನೇ ಈ ಚುನಾವಣೆಯಲ್ಲ ಸ್ಪರ್ಧೆ ಮಾಡಿದ್ದೇನೆ ಎಂದುಕೊಳ್ಳಿ. ದಯಮಾಡಿ ಯಾವ ಕಾರಣಕ್ಕೂ ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬಾರದು. ಕಾಂಗ್ರೆಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು. ಅವರನ್ನು ಲೋಕಸಭೆಗೆ ಕಳುಹಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನಾನೇ ಗೆದ್ದಂತೆ’ ಎಂದು ಹೇಳಿದರು.
ಕಾಣಿಸಿಕೊಳ್ಳದ ಕಾಂಗ್ರೆಸ್ ಅಭ್ಯರ್ಥಿ
‘ಪ್ರಜಾಧ್ವನಿ–2’ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗೈರು ಹಾಜರಾಗಿದ್ದರು. ಸಮಾವೇಶದಲ್ಲಿ ಎಲ್ಲಿಯೂ ಅಭ್ಯರ್ಥಿಯ ಭಾವಚಿತ್ರ ಕಾಣಿಸಿಕೊಂಡಿಲ್ಲ. ನಾಯಕರು ಅವರ ಹೆಸರನ್ನು ಹೇಳದೇ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ ಮಾಡಿದರು. ಸಮಾವೇಶದಲ್ಲಿ ಅಭ್ಯರ್ಥಿ ಹಾಜರಾದರೆ ಖರ್ಚು ವೆಚ್ಚವೆಲ್ಲಾ ಆ ಅಭ್ಯರ್ಥಿಯ ಲೆಕ್ಕಕ್ಕೆ ಹೋಗುತ್ತದೆ ಎಂಬ ಕಾರಣದಿಂದ ಅವರನ್ನು ಸಮಾವೇಶಕ್ಕೆ ಕರೆತಂದಿರಲಿಲ್ಲ ಎಂದು ವಿಶ್ಲೇಷಿಸಲಾಗುತ್ತದೆ. ‘ಮಾರ್ಗಸೂಚಿ ಪ್ರಕಾರ ಅಭ್ಯರ್ಥಿ ಗೈರು ಹಾಜರಾಗಿ ಭಾವಚಿತ್ರ ಇಲ್ಲದೇ ಇರುವುದರಿಂದ ಅವರ ಹೆಸರಿಗೆ ಖರ್ಚುವೆಚ್ಚ ಬೀಳುವುದಿಲ್ಲ. ಬದಲಾಗಿ ಪಕ್ಷಕ್ಕೆ ಬೀಳುತ್ತದೆ. ಪ್ರತಿಯೊಂದು ವೆಚ್ಚವನ್ನು ವಿಡಿಯೊ ಸರ್ವೆಲೆನ್ಸ್ ತಂಡದಿಂದ ಎಕ್ಸ್ಪೆಂಡಿಚರ್ ಅಬ್ಸರ್ವರ್ ಅವರು ಪರಿಶೀಲಿಸಿ ಖರ್ಚು ವೆಚ್ಚದ ಲೆಕ್ಕವನ್ನು ಅಭ್ಯರ್ಥಿಗೆ ಸಲ್ಲಿಸಲಾಗುತ್ತದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.