ದಾವಣಗೆರೆ: ‘ನಮಗಿಂತ ಕಾಂಗ್ರೆಸ್ ಪಕ್ಷದಲ್ಲೇ ಹೆಚ್ಚು ಒಡಕು ಉಂಟಾಗಿದ್ದು, ಕೇವಲ ಮಾತನಾಡುವುದಲ್ಲ. ತಾಕತ್ತಿದ್ದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ತೋರಿಸಲಿ’ ಎಂದು ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಸವಾಲು ಹಾಕಿದರು.
ಚನ್ನಗಿರಿ ಶಾಸಕ ಬಸವರಾಜ್ ವಿ.ಶಿವಗಂಗಾ ಹೇಳಿಕೆಗೆ ಹೇಳಿಕೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 6 ಬಾರಿ ಗೆದ್ದಿದ್ದು, ಒಂದು ಬಾರಿ ಸೋತಿದೆ. ಅವರು ಗೆದ್ದು ತೋರಿಸಬೇಕೇ ಹೊರತು ನಾವಲ್ಲ. ಅವರು ಬರೀ ಬುರುಡೆ ಬಿಡುವುದಲ್ಲ’ ಎಂದು ತಿರುಗೇಟು ನೀಡಿದರು.