ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಮೊದಲ ದಿನ ಐವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Published 13 ಏಪ್ರಿಲ್ 2024, 7:41 IST
Last Updated 13 ಏಪ್ರಿಲ್ 2024, 7:41 IST
ಅಕ್ಷರ ಗಾತ್ರ

ದಾವಣಗೆರೆ: ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೊದಲ ದಿನವಾದ ಶುಕ್ರವಾರ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮೊದಲ ದಿನ ಹಾಗೂ ಶುಕ್ರವಾರದ ಕಾರಣ ಶುಭ ಎಂದೇ ಭಾವಿಸಿ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ಕಣದಲ್ಲಿ ಪೈಪೋಟಿ ನೀಡುವ ಮುನ್ಸೂಚನೆ ನೀಡಿದರು.

ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಜಿ.ಬಿ.ವಿನಯ್‌ಕುಮಾರ್‌ ನಾಮಪತ್ರ ಸಲ್ಲಿಸಿದ್ದು, ಚುನಾವಣಾ ಕಣ ರಂಗೇರಲಿದೆ.

ಕಾಂಗ್ರೆಸ್ ಪಕ್ಷದಿಂದ ಡಾ. ಪ್ರಭಾ ಮಲ್ಲಿಕಾರ್ಜುನ್‌ ಎರಡು ನಾಮಪತ್ರ ಸಲ್ಲಿಸಿರುವುದರಿಂದ ಐವರು ಅಭ್ಯರ್ಥಿಗಳಿಂದ 6 ನಾಮಪತ್ರ ಸಲ್ಲಿಕೆಯಾದಂತಾಗಿದೆ.

ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮುನಿಸ್ಟ್)ನಿಂದ ತಿಪ್ಪೇಸ್ವಾಮಿ ಕೆ.ಎ.,  ಉತ್ತಮ ಪ್ರಜಾಕೀಯ ಪಕ್ಷದಿಂದ ಈಶ್ವರ, ಕೆ.ಆರ್.ಎಸ್. ಪಕ್ಷದಿಂದ ರಾಘವೇಂದ್ರ ಜಿ.ಪಿ. ನಾಮಪತ್ರ ಸಲ್ಲಿಸಿದ್ದಾರೆ.

ಹಣಬಲದಿಂದ ಮೆರೆಯುತ್ತಿರುವ ಬಿಜೆಪಿ ನಾಯಕರು:

‘ಬಿಜೆಪಿಯಲ್ಲಿನ ಕಾರ್ಯಕರ್ತರು ಬೇಸರಿಗೊಂಡಿದ್ದಾರೆ. ನಾಯಕರು ಹಣಬಲದಿಂದ ಮೆರೆಯುತ್ತಿದ್ದಾರೆ. ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಅದರಿಂದ ಬೇಸರಗೊಂಡು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ. ಇನ್ನೂ ಹಲವರು ಬರಲಿದ್ದಾರೆ‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ದೂರಿದರು.

‘ಪ್ರಭಾ ಮಲ್ಲಿಕಾರ್ಜುನ್‌ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಕಾರ್ಯಕರ್ತರ ಪಕ್ಷ. ಅವರನ್ನು ವಿಶ್ವಾಸಕ್ಕೆ ತೆಗದುಕೊಂಡು ಚುಮಾವಣೆ ಎದುರಿಸುತ್ತೇವೆ‘ ಎಂದರು.

‘ಡಾ.ಪ್ರಭಾ ಮಲ್ಲಿಕಾರ್ಜುನ್‌ ನಾಮಪತ್ರ ಸಲ್ಲಿಸಿದ್ದು, ಜನರು ಆಶೀರ್ವಾದ ಮಾಡಲಿದ್ದಾರೆ. ಕ್ಷೇತ್ರದಲ್ಲಿ ಪಕ್ಷಕ್ಕೆ ಉತ್ತಮ ವಾತಾವರಣ ಇದೆ. ಗ್ಯಾರಂಟಿ ಯೋಜನೆ ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ. ಇಂದಿರಾಗಾಂಧಿ ಕಾಲದಿಂದಲೂ ಪಕ್ಷದ ಜನಪರ ಯೋಜನೆ ಜಾರಿಗೊಳಿಸಿದೆ. ಅದರ ಭಾಗವಾದ ಗ್ಯಾರಂಟಿ ಯೋಜನೆ ಕೈಹಿಡಲಿವೆ‘ ಎಂದರು.

‘ಗೆದ್ದ ಮೇಲೆ ಪ್ರಭಾ ಮಲ್ಲಿಕಾರ್ಜುನ್‌ ಜಿಲ್ಲೆಯ ಅಭಿವೃದ್ದಿ ಮಾಡುತ್ತಾರೆ ಎಂಬ ವಿಶ್ವಾಸ ಇದೆ‘ ಎಂದರು.

‘ಎಲ್ಲರಿಗೂ ಸ್ಪರ್ಧಿಸಬೇಕೆಂಬ ಆಸೆ ಇರುವುದು ಸಹಜ. ಆದರೆ ಹೈಕಮಾಂಡ್‌ ಪ್ರಭಾಗೆ ಟಿಕೆಟ್‌ ನೀಡಿದೆ. ಅವರು ಗೆಲ್ಲುವ ವಿಶ್ವಾಸ ಇದೆ‘ ಎಂದರು.

ಶಾಸಕರಾದ ಕೆ.ಎಸ್‌. ಬಸವಂತಪ್ಪ, ಬಿ. ದೇವೇಂದ್ರಪ್ಪ, ಲತಾ ಮಲ್ಲಿಕಾರ್ಜುನ್‌ ಹಾಗೂ ಮುಖಂಡರು, ಕಾರ್ಯಕರ್ತರು ಇದ್ದರು.

ದಾವಣಗೆರೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಸಿ ಹೊರಬಂದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಶಾಸಕರಾದ ಬಸವಂತಪ್ಪ ದೇವೇಂದ್ರಪ್ಪ ಉಪಸ್ಥಿತರಿದ್ದರು –ಪ್ರಜಾವಾಣಿ ಚಿತ್ರ/ಸತೀಶ ಬಡಿಗೇರ್
ದಾವಣಗೆರೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಸಿ ಹೊರಬಂದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಶಾಸಕರಾದ ಬಸವಂತಪ್ಪ ದೇವೇಂದ್ರಪ್ಪ ಉಪಸ್ಥಿತರಿದ್ದರು –ಪ್ರಜಾವಾಣಿ ಚಿತ್ರ/ಸತೀಶ ಬಡಿಗೇರ್
ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್‌ಕುಮಾರ್ ನಾಮಪತ್ರ ಸಲ್ಲಿಸಿ ಹೊರಬಂದು ಗೆಲುವಿನ ಸಂಕೇತ ತೋರಿದರು
ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್‌ಕುಮಾರ್ ನಾಮಪತ್ರ ಸಲ್ಲಿಸಿ ಹೊರಬಂದು ಗೆಲುವಿನ ಸಂಕೇತ ತೋರಿದರು
‘ಬಂಡಾಯ ಪರಿಣಾಮ ಬೀರದು’
‘ನಾಮಪತ್ರ ಸಲ್ಲಿಸಿರುವುದಕ್ಕೆ ಸಂತೋಷವಾಗಿದೆ. ಹಲವೆಡೆ ಈಗಾಗಲೇ ಪ್ರಚಾರ ನಡೆಸಿದ್ದು ಗೆಲುವಿಗೆ ಪೂರಕ ವಾತಾವರಣ ಇದೆ‘ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಜಿಲ್ಲೆಯ 5 ಜನ ಶಾಸಕರು ಹಾಗೂ ಪರ‍ಪನಹಳ್ಳಿಯ ಶಾಸಕಿ ಲತಾ ಮಲ್ಲಿಕಾರ್ಜುನ್‌ ಜತೆಗಿದ್ದಾರೆ. ಕಾಂಗ್ರೆಸ್‌ ಮುಖಂಡರು ಮುಖಂಡರು ಕಾರ್ಯಕತರು ಗೆಲವಿಗೆ ಪರಿಶ್ರಮ ಪಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಚುನಾವಣೆ ಎದುರಿಸುತ್ತೇವೆ‘ ಎಂದರು. ‘ಪ್ರತಿ ಚುನಾವಣೆಯಲ್ಲಿ ಬಂಡಾಯ ಇದ್ದೇ ಇರುತ್ತದೆ. ಜನರು ಯಾರ ಪರ ಮತ ಹಾಕಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ‘ ಎಂದರು. ‘ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ‘ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಮೊದಲ ಪಕ್ಷೇತರ ಅಭ್ಯರ್ಥಿ ನಾನು. ಮತ್ತೆ ಏಪ್ರಿಲ್‌ 18ರಂದು ಬೆಂಬಲಿಗರೊಂದಿಗೆ ಬಂದು ನಾಮಪತ್ರ ಸಲ್ಲಿಸಲಿದ್ದೇನೆ’ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್‌ಕುಮಾರ್‌ ಹೇಳಿದರು. ‘ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಂಧಾನಕ್ಕೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ನನ್ನ ಸ್ಪರ್ಧೆ ಖಚಿತ. ಜನರು ನಾನು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹಾಕಿದ್ದರಿಂದ ಸ್ಪರ್ಧಿಸಿದ್ದೇನೆ. ಇದು ಬಹು ಜನರ ಅಪೇಕ್ಷೆಯೂ ಆಗಿದೆ’ ಎಂದರು. ‘ಈಗಾಗಲೇ ಶೇ 80ರಷ್ಟು ಹಳ್ಳಿಗಳನ್ನು ಸುತ್ತಿದ್ದು ಎಲ್ಲೆಡೆ ಜನರ ಸ್ಪಂದನೆ ಉತ್ತಮವಾಗಿದೆ. ದಾವಣಗೆರೆ ನಗರದಲ್ಲಿ ಇಂದು ಪ್ರಚಾರ ನಡೆಸಿದ್ದೇನೆ. ಜನರು ಬೆಂಬಲ ನೀಡುತ್ತಿದ್ದಾರೆ. ಕೆಲವರಲ್ಲಿ ಭಯ ಇದೆ. ಅದನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಮತದಾನದ ದಿನ ಆ ಭಯ ಸ್ಫೋಟಗೊಂಡು ಮತವಾಗಿ ಪರಿವರ್ತನೆಯಾಗಲಿದೆ. ಅಧಿಕಾರ ವಿಕೇಂದ್ರೀಕರಣಕ್ಕೆ ಅವರೆಲ್ಲರೂ ನನಗೆ ಮತ ಹಾಕಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ನಾನು ಅವಸರ ಮಾಡಲಿಲ್ಲ. ನನಗಿಂತ ಚಿಕ್ಕ ವಯಸ್ಸಿನವರಿಗೆ ಟಿಕೆಟ್‌ ನೀಡಲಾಗಿದೆ. ನನಗೂ ನೀಡಬಹುದಿತ್ತು. ಜನರು ಕುಟುಂಬ ಕಾಜಕಾರಣ ವಿರೋಧಿಸಿ ನನಗೆ ಮತ ಹಾಕಲಿದ್ದಾರೆ. ದಾವಣಗೆರೆಲ್ಲಿ ಹೊಸಬರಿಗೆ ವಕಾಶ ಸಿಗಲಿ ಎಂಬ ಆಶಾಭಾವನೆಯಿಂದ ನನ್ನನ್ನು ಬೆಂಬಲಿಸಲಿದ್ದಾರೆ. ಆಂತರಿಕ ಸಮೀಕ್ಷೆ ನಡೆಸಿದ್ದು ಗೆಲುವು ನನ್ನದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT