<p><strong>ಹರಿಹರ</strong>: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದವರಿಗೆ ರಾಜಕೀಯ ಪಕ್ಷಗಳು ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು’ ಎಂದು ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.</p>.<p>‘ವೀರಶೈವ ಲಿಂಗಾಯತರ ಸಮುದಾಯದ ಒಳ ಪಂಗಡಗಳಲ್ಲಿ ಪಂಚಮಸಾಲಿ ಸಮುದಾಯ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದೇವೆ. ದಾವಣಗೆರೆ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆ, ಕೊಪ್ಪಳ ಸೇರಿದಂತೆ ರಾಜ್ಯದ ಇತರೆ ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದವರೇ ನಿರ್ಣಾಯಕ ಮತದಾರರಾಗಿದ್ದಾರೆ. ಈ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. </p>.<p>ರಾಜಕೀಯ ಪಕ್ಷಗಳು ಟಿಕೆಟ್ ನೀಡಲು ಮುಂದೆ ಬಂದರೆ ನೀವು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ, ‘ಅಂತಹ ಸಂದರ್ಭ ಬಂದಾಗ ನೋಡೋಣ’ ಎಂದು ಸ್ವಾಮೀಜಿ ಪ್ರತಿಕ್ರಿಯಿಸಿದರು.</p>.<p>‘ನಮ್ಮ ಸಮುದಾಯದವರನ್ನು ಎಲ್ಲಾ ರಾಜಕೀಯ ಪಕ್ಷಗಳೂ ಬಳಸಿಕೊಂಡಿವೆ. ಲಾಭವನ್ನು ಪಡೆದು ಅಧಿಕಾರವನ್ನು ಅನುಭವಿಸುತ್ತಾ, ನಮ್ಮನ್ನು ಕಡೆಗಣಿಸಿವೆ’ ಎಂದು ಗುರುಪೀಠದ ಆಡಳಿತಾಧಿಕಾರಿ ರಾಜ್ಕುಮಾರ್ ಆರೋಪಿಸಿದರು.</p>.<p>‘ಲಿಂಗಾಯತ ಸಮುದಾಯದಲ್ಲಿ ಶೇ 5ರಷ್ಟು ಇರುವವರು, ಇಂದು ಅಧಿಕಾರವನ್ನು ಅನುಭವಿಸುತ್ತಿದ್ದಾರೆ. ಇತ್ತಿಚಿನ ದಿನಗಳಲ್ಲಿ 4 ಜನ ಮುಖ್ಯಮಂತ್ರಿ ಹಾಗೂ ಹಲವರು ಉಪ ಮುಖ್ಯಮಂತ್ರಿ ಆದರೂ ಆದರೂ ನಮ್ಮ ಸಮುದಾಯಕ್ಕೆ ಅವಕಾಶ ನೀಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ರಾಜ್ಯ ವೀರಶೈವ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಗುರುಪೀಠದ ತೀರ್ಮಾನದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯದವರಿಗೆ ಹೆಚ್ಚಿನ ಅವಕಾಶ ನೀಡುವಂತೆ ರಾಷ್ಟ್ರೀಯ ಪಕ್ಷಗಳಿಗೆ ಹಕ್ಕೊತ್ತಾಯ ಮಂಡಿಸಲಾಗುವುದು’ ಎಂದರು.</p>.<p>‘ಸಮುದಾಯದ ಇಂತಹ ಮುಖಂಡರಿಗೆ ಟಿಕೆಟ್ ನೀಡಬೇಕು ಎಂದು ನಾವು ಬಯಸುವುದಿಲ್ಲ, ಪಂಚಮಸಾಲಿ ಸಮುದಾಯದವರಿಗೆ ಯಾವ ಕ್ಷೇತ್ರದಲ್ಲಿ, ಯಾವ ಮುಖಂಡರಿಗೆ ಟಿಕೆಟ್ ನೀಡಿದರೆ ಉತ್ತಮ ಎಂದು ಆಯ್ಕೆ ಮಾಡುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗಿದೆ. ಕನಿಷ್ಠ 5 ಕ್ಷೇತ್ರಗಳಲ್ಲಿ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎನ್ನುವುದು ನಮ್ಮ ಒತ್ತಾಯ’ ಎಂದು ಹೇಳಿದರು.</p>.<p>ಗುರುಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿಗಳಾದ ಬಾವಿ ಬೆಟ್ಟಪ್ಪ, ಜ್ಯೋತಿ ಪ್ರಕಾಶ್, ನಾಗರಾಜ್, ಚಂದ್ರಶೇಖರ್ ಪೂಜಾರ್, ರಾಜ್ಯ ಪಂಚಮಸಾಲಿ ಸಮಾಜದ ಅಧ್ಯಕ್ಷ ಜಿ.ಪಿ. ಪಾಟೀಲ್, ವಕೀಲ ಪ್ರಕಾಶ್ ಪಾಟೀಲ್ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದವರಿಗೆ ರಾಜಕೀಯ ಪಕ್ಷಗಳು ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು’ ಎಂದು ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.</p>.<p>‘ವೀರಶೈವ ಲಿಂಗಾಯತರ ಸಮುದಾಯದ ಒಳ ಪಂಗಡಗಳಲ್ಲಿ ಪಂಚಮಸಾಲಿ ಸಮುದಾಯ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದೇವೆ. ದಾವಣಗೆರೆ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆ, ಕೊಪ್ಪಳ ಸೇರಿದಂತೆ ರಾಜ್ಯದ ಇತರೆ ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದವರೇ ನಿರ್ಣಾಯಕ ಮತದಾರರಾಗಿದ್ದಾರೆ. ಈ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. </p>.<p>ರಾಜಕೀಯ ಪಕ್ಷಗಳು ಟಿಕೆಟ್ ನೀಡಲು ಮುಂದೆ ಬಂದರೆ ನೀವು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ, ‘ಅಂತಹ ಸಂದರ್ಭ ಬಂದಾಗ ನೋಡೋಣ’ ಎಂದು ಸ್ವಾಮೀಜಿ ಪ್ರತಿಕ್ರಿಯಿಸಿದರು.</p>.<p>‘ನಮ್ಮ ಸಮುದಾಯದವರನ್ನು ಎಲ್ಲಾ ರಾಜಕೀಯ ಪಕ್ಷಗಳೂ ಬಳಸಿಕೊಂಡಿವೆ. ಲಾಭವನ್ನು ಪಡೆದು ಅಧಿಕಾರವನ್ನು ಅನುಭವಿಸುತ್ತಾ, ನಮ್ಮನ್ನು ಕಡೆಗಣಿಸಿವೆ’ ಎಂದು ಗುರುಪೀಠದ ಆಡಳಿತಾಧಿಕಾರಿ ರಾಜ್ಕುಮಾರ್ ಆರೋಪಿಸಿದರು.</p>.<p>‘ಲಿಂಗಾಯತ ಸಮುದಾಯದಲ್ಲಿ ಶೇ 5ರಷ್ಟು ಇರುವವರು, ಇಂದು ಅಧಿಕಾರವನ್ನು ಅನುಭವಿಸುತ್ತಿದ್ದಾರೆ. ಇತ್ತಿಚಿನ ದಿನಗಳಲ್ಲಿ 4 ಜನ ಮುಖ್ಯಮಂತ್ರಿ ಹಾಗೂ ಹಲವರು ಉಪ ಮುಖ್ಯಮಂತ್ರಿ ಆದರೂ ಆದರೂ ನಮ್ಮ ಸಮುದಾಯಕ್ಕೆ ಅವಕಾಶ ನೀಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ರಾಜ್ಯ ವೀರಶೈವ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಗುರುಪೀಠದ ತೀರ್ಮಾನದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯದವರಿಗೆ ಹೆಚ್ಚಿನ ಅವಕಾಶ ನೀಡುವಂತೆ ರಾಷ್ಟ್ರೀಯ ಪಕ್ಷಗಳಿಗೆ ಹಕ್ಕೊತ್ತಾಯ ಮಂಡಿಸಲಾಗುವುದು’ ಎಂದರು.</p>.<p>‘ಸಮುದಾಯದ ಇಂತಹ ಮುಖಂಡರಿಗೆ ಟಿಕೆಟ್ ನೀಡಬೇಕು ಎಂದು ನಾವು ಬಯಸುವುದಿಲ್ಲ, ಪಂಚಮಸಾಲಿ ಸಮುದಾಯದವರಿಗೆ ಯಾವ ಕ್ಷೇತ್ರದಲ್ಲಿ, ಯಾವ ಮುಖಂಡರಿಗೆ ಟಿಕೆಟ್ ನೀಡಿದರೆ ಉತ್ತಮ ಎಂದು ಆಯ್ಕೆ ಮಾಡುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗಿದೆ. ಕನಿಷ್ಠ 5 ಕ್ಷೇತ್ರಗಳಲ್ಲಿ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎನ್ನುವುದು ನಮ್ಮ ಒತ್ತಾಯ’ ಎಂದು ಹೇಳಿದರು.</p>.<p>ಗುರುಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿಗಳಾದ ಬಾವಿ ಬೆಟ್ಟಪ್ಪ, ಜ್ಯೋತಿ ಪ್ರಕಾಶ್, ನಾಗರಾಜ್, ಚಂದ್ರಶೇಖರ್ ಪೂಜಾರ್, ರಾಜ್ಯ ಪಂಚಮಸಾಲಿ ಸಮಾಜದ ಅಧ್ಯಕ್ಷ ಜಿ.ಪಿ. ಪಾಟೀಲ್, ವಕೀಲ ಪ್ರಕಾಶ್ ಪಾಟೀಲ್ ಇದ್ದರು. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>