‘ವೀರಶೈವ ಲಿಂಗಾಯತರ ಸಮುದಾಯದ ಒಳ ಪಂಗಡಗಳಲ್ಲಿ ಪಂಚಮಸಾಲಿ ಸಮುದಾಯ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದೇವೆ. ದಾವಣಗೆರೆ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆ, ಕೊಪ್ಪಳ ಸೇರಿದಂತೆ ರಾಜ್ಯದ ಇತರೆ ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದವರೇ ನಿರ್ಣಾಯಕ ಮತದಾರರಾಗಿದ್ದಾರೆ. ಈ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.