<p><strong>ಜಗಳೂರು: </strong>ತಾಲ್ಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ಪಿಡಿಒ ಬಿ. ಬಸವರಾಜಪ್ಪ ಅವರು ಮನೆಯ ಇ-ಸ್ವತ್ತು ಖಾತೆ ಮಾಡಿಕೊಡಲು ಗ್ರಾಮಸ್ಥರೊಬ್ಬರಿಂದ ₹ 5,000 ಪಡೆಯುತ್ತಿದ್ದ ವೇಳೆ ದಾವಣಗೆರೆಯಲ್ಲಿ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.</p>.<p>ದೇವಿಕೆರೆ ಪಂಚಾಯಿತಿ ವ್ಯಾಪ್ತಿಯ ಮೆದಿಕೆರೇನಹಳ್ಳಿ ಗ್ರಾಮದ ಶಾಂತಕುಮಾರ್ ಎಂಬುವವರ ತಾಯಿ ಶಾರದಮ್ಮ ಹೆಸರಿನಲ್ಲಿರುವ ಮನೆಯ ಇ-ಸ್ವತ್ತು ಖಾತೆಯನ್ನು ಮಾಡಿಕೊಡಲು ಪಿಡಿಒ ಬಿ. ಬಸವರಾಜಪ್ಪ ₹ 10 ಸಾವಿರ ಹಣಕ್ಕೆ ಬೇಡಿಕೆ ಇಟ್ಟು ಸತಾಯಿಸುತ್ತಿದ್ದರು. ದೂರುದಾರರ ದೂರಿನ ಆಧಾರದ ಮೇಲೆ ಬಲೆ ಬೀಸಿದ ಲೋಕಾಯುಕ್ತರು ದಾವಣಗೆರೆ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಕಟ್ಟಡವೊಂದರಲ್ಲಿ ಪಿಡಿಒ ಬಸವರಾಜಪ್ಪ ದೂರುದಾರರಿಂದ ₹ 5000 ಪಡೆಯುತ್ತಿದ್ದಾದ ದಾಳಿ ನಡೆಸಿ ಬಂಧಿಸಿದ್ದಾರೆ. ಜಿಲ್ಲಾ ಲೋಕಾಯುಕ್ತ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರಾಷ್ಟ್ರಪತಿ, ಆಂಜನೇಯ ಹಾಗೂ ಸಿಬ್ಬಂದಿ ಚಂದ್ರಶೇಖರ್, ವೀರೇಶಯ್ಯ, ಸುರೇಶ್, ಧನರಾಜ್, ಮೋಹನ್, ಬಸವರಾಜ ಹಾಗೂ ವಿನಾಯಕ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು: </strong>ತಾಲ್ಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ಪಿಡಿಒ ಬಿ. ಬಸವರಾಜಪ್ಪ ಅವರು ಮನೆಯ ಇ-ಸ್ವತ್ತು ಖಾತೆ ಮಾಡಿಕೊಡಲು ಗ್ರಾಮಸ್ಥರೊಬ್ಬರಿಂದ ₹ 5,000 ಪಡೆಯುತ್ತಿದ್ದ ವೇಳೆ ದಾವಣಗೆರೆಯಲ್ಲಿ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.</p>.<p>ದೇವಿಕೆರೆ ಪಂಚಾಯಿತಿ ವ್ಯಾಪ್ತಿಯ ಮೆದಿಕೆರೇನಹಳ್ಳಿ ಗ್ರಾಮದ ಶಾಂತಕುಮಾರ್ ಎಂಬುವವರ ತಾಯಿ ಶಾರದಮ್ಮ ಹೆಸರಿನಲ್ಲಿರುವ ಮನೆಯ ಇ-ಸ್ವತ್ತು ಖಾತೆಯನ್ನು ಮಾಡಿಕೊಡಲು ಪಿಡಿಒ ಬಿ. ಬಸವರಾಜಪ್ಪ ₹ 10 ಸಾವಿರ ಹಣಕ್ಕೆ ಬೇಡಿಕೆ ಇಟ್ಟು ಸತಾಯಿಸುತ್ತಿದ್ದರು. ದೂರುದಾರರ ದೂರಿನ ಆಧಾರದ ಮೇಲೆ ಬಲೆ ಬೀಸಿದ ಲೋಕಾಯುಕ್ತರು ದಾವಣಗೆರೆ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಕಟ್ಟಡವೊಂದರಲ್ಲಿ ಪಿಡಿಒ ಬಸವರಾಜಪ್ಪ ದೂರುದಾರರಿಂದ ₹ 5000 ಪಡೆಯುತ್ತಿದ್ದಾದ ದಾಳಿ ನಡೆಸಿ ಬಂಧಿಸಿದ್ದಾರೆ. ಜಿಲ್ಲಾ ಲೋಕಾಯುಕ್ತ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರಾಷ್ಟ್ರಪತಿ, ಆಂಜನೇಯ ಹಾಗೂ ಸಿಬ್ಬಂದಿ ಚಂದ್ರಶೇಖರ್, ವೀರೇಶಯ್ಯ, ಸುರೇಶ್, ಧನರಾಜ್, ಮೋಹನ್, ಬಸವರಾಜ ಹಾಗೂ ವಿನಾಯಕ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>