<p><strong>ದಾವಣಗೆರೆ:</strong> ದರಖಾಸ್ತು ಜಮೀನು ಪೋಡಿಯ ತಾಂತ್ರಿಕ ವರದಿಗೆ ₹ 50,000 ಲಂಚ ಪಡೆದ ಚನ್ನಗಿರಿ ತಾಲ್ಲೂಕು ಸರ್ವೆ ಸೂಪರ್ವೈಸರ್ ಕೆ.ಎಚ್. ಆಂಜನಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ನಗರದ ಹಳೆ ಬಸ್ ನಿಲ್ದಾಣದ ಸಮೀಪ ಶುಕ್ರವಾರ ರಾತ್ರಿ ಲಂಚ ಪಡೆಯುತ್ತಿದ್ದ ಆಂಜನಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.</p><p>ಚನ್ನಗಿರಿ ತಾಲ್ಲೂಕಿನ ಮಧುರ ನಾಯಕನಹಳ್ಳಿಯ ಸರ್ವೆ ನಂಬರ್ 46ರಲ್ಲಿ ಎ.ಬಿ. ಕುಮಾರ ನಾಯ್ಕ ಅವರು 4 ಎಕರೆ ದರಖಾಸ್ತು ಜಮೀನು ಹದ್ದುಬಸ್ತಿಗೆ ಭೂದಾಖಲೆಗಳ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಪೋಡಿ ರದ್ದು ಹಾಗೂ ದುರಸ್ತಿ ಮಾಡದೇ ಅಳತೆ ಸಾಧ್ಯವಿಲ್ಲ ಎಂಬುದಾಗಿ ಸರ್ವೇಯರ್ ಹಿಂಬರಹ ನೀಡಿದ್ದರು. ಈ ಕುರಿತು ಕುಮಾರ ನಾಯ್ಕ ಭೂದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಮೇಲ್ಮನವಿ ಸಲ್ಲಿಸಿದ್ದರು.</p><p>ಮೇಲ್ಮನವಿ ಪರಿಶೀಲಿಸಿದ ಜಂಟಿ ನಿರ್ದೇಶಕರು ತಾಂತ್ರಿಕ ವರದಿ ನೀಡುವಂತೆ ತಾಲ್ಲೂಕು ಸಹಾಯಕ ನಿರ್ದೇಶಕರಿಗೆ (ಎಡಿಎಲ್ಆರ್) ಸೂಚಿಸಿದ್ದರು. ಈ ಹೊಣೆಯನ್ನು ಸರ್ವೆ ಸೂಪರ್ವೈಸರ್ ಕೆ.ಎಚ್. ಆಂಜನಪ್ಪ ಅವರಿಗೆ ವಹಿಸಲಾಗಿತ್ತು. ಏ.2ರಂದು ಜಮೀನಿಗೆ ಧಾವಿಸಿದ ಆಂಜನಪ್ಪ ಸರ್ವೆ ಕಾರ್ಯ ಪೂರ್ಣಗೊಳಿಸಿದ್ದರು.</p><p>‘ಪೋಡಿಯ ತಾಂತ್ರಿಕ ವರದಿಯನ್ನು ಅರ್ಜಿದಾರರ ಪರವಾಗಿ ನೀಡಲು ಕುಮಾರ ನಾಯ್ಕ ಅವರಿಗೆ ₹ 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ಕುಮಾರನಾಯ್ಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಗರದ ಹಳೆ ಬಸ್ ನಿಲ್ದಾಣದ ಬಳಿ ಆಂಜನಪ್ಪ ಅವರ ಸ್ನೇಹಿತ ಶ್ರೀಧರ್ಗೆ ₹ 50,000 ತಲುಪಿಸಿದಾಗ ದಾಳಿ ನಡೆಸಲಾಗಿತ್ತು. ಬಳಿಕ ಸರ್ವೆ ಸೂಪರ್ವೈಸರ್ ಅವರನ್ನೂ ಬಂಧಿಸಲಾಯಿತು’ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೂರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ದರಖಾಸ್ತು ಜಮೀನು ಪೋಡಿಯ ತಾಂತ್ರಿಕ ವರದಿಗೆ ₹ 50,000 ಲಂಚ ಪಡೆದ ಚನ್ನಗಿರಿ ತಾಲ್ಲೂಕು ಸರ್ವೆ ಸೂಪರ್ವೈಸರ್ ಕೆ.ಎಚ್. ಆಂಜನಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p><p>ನಗರದ ಹಳೆ ಬಸ್ ನಿಲ್ದಾಣದ ಸಮೀಪ ಶುಕ್ರವಾರ ರಾತ್ರಿ ಲಂಚ ಪಡೆಯುತ್ತಿದ್ದ ಆಂಜನಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.</p><p>ಚನ್ನಗಿರಿ ತಾಲ್ಲೂಕಿನ ಮಧುರ ನಾಯಕನಹಳ್ಳಿಯ ಸರ್ವೆ ನಂಬರ್ 46ರಲ್ಲಿ ಎ.ಬಿ. ಕುಮಾರ ನಾಯ್ಕ ಅವರು 4 ಎಕರೆ ದರಖಾಸ್ತು ಜಮೀನು ಹದ್ದುಬಸ್ತಿಗೆ ಭೂದಾಖಲೆಗಳ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಪೋಡಿ ರದ್ದು ಹಾಗೂ ದುರಸ್ತಿ ಮಾಡದೇ ಅಳತೆ ಸಾಧ್ಯವಿಲ್ಲ ಎಂಬುದಾಗಿ ಸರ್ವೇಯರ್ ಹಿಂಬರಹ ನೀಡಿದ್ದರು. ಈ ಕುರಿತು ಕುಮಾರ ನಾಯ್ಕ ಭೂದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಮೇಲ್ಮನವಿ ಸಲ್ಲಿಸಿದ್ದರು.</p><p>ಮೇಲ್ಮನವಿ ಪರಿಶೀಲಿಸಿದ ಜಂಟಿ ನಿರ್ದೇಶಕರು ತಾಂತ್ರಿಕ ವರದಿ ನೀಡುವಂತೆ ತಾಲ್ಲೂಕು ಸಹಾಯಕ ನಿರ್ದೇಶಕರಿಗೆ (ಎಡಿಎಲ್ಆರ್) ಸೂಚಿಸಿದ್ದರು. ಈ ಹೊಣೆಯನ್ನು ಸರ್ವೆ ಸೂಪರ್ವೈಸರ್ ಕೆ.ಎಚ್. ಆಂಜನಪ್ಪ ಅವರಿಗೆ ವಹಿಸಲಾಗಿತ್ತು. ಏ.2ರಂದು ಜಮೀನಿಗೆ ಧಾವಿಸಿದ ಆಂಜನಪ್ಪ ಸರ್ವೆ ಕಾರ್ಯ ಪೂರ್ಣಗೊಳಿಸಿದ್ದರು.</p><p>‘ಪೋಡಿಯ ತಾಂತ್ರಿಕ ವರದಿಯನ್ನು ಅರ್ಜಿದಾರರ ಪರವಾಗಿ ನೀಡಲು ಕುಮಾರ ನಾಯ್ಕ ಅವರಿಗೆ ₹ 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ಕುಮಾರನಾಯ್ಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಗರದ ಹಳೆ ಬಸ್ ನಿಲ್ದಾಣದ ಬಳಿ ಆಂಜನಪ್ಪ ಅವರ ಸ್ನೇಹಿತ ಶ್ರೀಧರ್ಗೆ ₹ 50,000 ತಲುಪಿಸಿದಾಗ ದಾಳಿ ನಡೆಸಲಾಗಿತ್ತು. ಬಳಿಕ ಸರ್ವೆ ಸೂಪರ್ವೈಸರ್ ಅವರನ್ನೂ ಬಂಧಿಸಲಾಯಿತು’ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೂರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>