ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಆನಗೋಡು ಸಮೀಪದ ಉಳುಪಿನಕಟ್ಟೆ ಫ್ಲೈಓವರ್ನಲ್ಲಿ ಸೋಮವಾರ ರಾತ್ರಿ ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದಾರೆ.
ಟ್ರ್ಯಾಕ್ಟರ್ನಲ್ಲಿ ದಾವಣಗೆರೆಯಿಂದ ಪೈಪ್ಗಳನ್ನು ತುಂಬಿಸಿಕೊಂಡು ಹಾಲವರ್ತಿ ಕಡೆಗೆ ಹೋಗುತ್ತಿತ್ತು. ದಾವಣಗೆರೆಯಿಂದ ಬೆಂಗಳೂರು ಕಡೆಗೆ ನಿಟುವಳ್ಳಿ ಸಂತೋಷ್ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯು ಟ್ರ್ಯಾಕ್ಟರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಲಾರಿಯ ಎಡಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅನ್ನಪೂರ್ಣಮ್ಮ ಅವರು ವಿಧಾನಸೌಧ ನೋಡಬೇಕು ಎಂದು ತನ್ನ ಪತಿ ಜತೆಗೆ ಲಾರಿಯಲ್ಲಿ ಹೊರಟಿದ್ದರು. ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿವೈಎಸ್ಪಿ ಬಸವರಾಜ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ನಿಂಗನಗೌಡ ನೆಗಳನೂರು, ಸಿಬ್ಬಂದಿ ಪ್ರಕಾಶ್, ರಂಗಸ್ವಾಮಿ, ಅಣ್ಣಯ್ಯ, ನೂರುಲ್ಲಾ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಟ್ರ್ಯಾಕ್ಟರ್ ಅನ್ನು ತೆಗಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.