<p><strong>ಜಗಳೂರು:</strong> ತಾಲ್ಲೂಕಿನ ಮುಸ್ಟೂರು ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೇಲೆ ಸೋಮವಾರ ಲಾರಿ ಹರಿದು ತೀವ್ರವಾಗಿ ಗಾಯಗೊಂಡಿದ್ದು, ಗ್ರಾಮಸ್ಥರು ಹಾಗೂ ಆ್ಯಂಬುಲೆನ್ಸ್ ಚಾಲಕರು ಆಸ್ಪತ್ರೆಗೆ ಕರೆದೋಯ್ದು ಮಾನವೀಯತೆ ಮೆರೆದಿದ್ದಾರೆ.</p>.<p>ಚಿತ್ರದುರ್ಗ ತಾಲ್ಲೂಕಿನ ಕಡಬನಕಟ್ಟೆ ಗ್ರಾಮದ ರಕ್ಷಿತ್ (16) ಗಾಯಗೊಂಡ ವಿದ್ಯಾರ್ಥಿ.ಜಗಳೂರಿನಿಂದ ಮುಸ್ಟೂರು ಗ್ರಾಮಕ್ಕೆ ಬಂದಿಳಿದ ವಿದ್ಯಾರ್ಥಿ ರಸ್ತೆ ದಾಟಿಕೊಂಡು ಕಡಬನಕಟ್ಟೆಗೆ ಬಸ್ ಹತ್ತಲು ಹೋಗುವ ಸಮಯದಲ್ಲಿ ಜಗಳೂರಿನ ಮಾರ್ಗವಾಗಿ ಬಂದ ಲಾರಿ ವಿದ್ಯಾರ್ಥಿಯ ಕಾಲಿನ ಮೇಲೆ ಹರಿದಿದೆ.</p>.<p>ಅಪಘಾತ ಸಂಭವಿಸಿದ ಕೂಡಲೇ ನೆರವಿಗೆ ಧಾವಿಸಿ ಬಂದ ಗ್ರಾಮಸ್ಥರು ಆಂಬ್ಯುಲೆನ್ಸ್ ಕರೆಸಿ ಚಿತ್ರದುರ್ಗಕ್ಕೆ ಚಿಕಿತ್ಸೆಗೆ ಕಳುಹಿಸಲು ನೆರವಾದರು. ರಕ್ಷಿತ್ನನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಕರೆದೊಯ್ಯಲಾಗಿದೆ.</p>.<p>ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು:</strong> ತಾಲ್ಲೂಕಿನ ಮುಸ್ಟೂರು ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೇಲೆ ಸೋಮವಾರ ಲಾರಿ ಹರಿದು ತೀವ್ರವಾಗಿ ಗಾಯಗೊಂಡಿದ್ದು, ಗ್ರಾಮಸ್ಥರು ಹಾಗೂ ಆ್ಯಂಬುಲೆನ್ಸ್ ಚಾಲಕರು ಆಸ್ಪತ್ರೆಗೆ ಕರೆದೋಯ್ದು ಮಾನವೀಯತೆ ಮೆರೆದಿದ್ದಾರೆ.</p>.<p>ಚಿತ್ರದುರ್ಗ ತಾಲ್ಲೂಕಿನ ಕಡಬನಕಟ್ಟೆ ಗ್ರಾಮದ ರಕ್ಷಿತ್ (16) ಗಾಯಗೊಂಡ ವಿದ್ಯಾರ್ಥಿ.ಜಗಳೂರಿನಿಂದ ಮುಸ್ಟೂರು ಗ್ರಾಮಕ್ಕೆ ಬಂದಿಳಿದ ವಿದ್ಯಾರ್ಥಿ ರಸ್ತೆ ದಾಟಿಕೊಂಡು ಕಡಬನಕಟ್ಟೆಗೆ ಬಸ್ ಹತ್ತಲು ಹೋಗುವ ಸಮಯದಲ್ಲಿ ಜಗಳೂರಿನ ಮಾರ್ಗವಾಗಿ ಬಂದ ಲಾರಿ ವಿದ್ಯಾರ್ಥಿಯ ಕಾಲಿನ ಮೇಲೆ ಹರಿದಿದೆ.</p>.<p>ಅಪಘಾತ ಸಂಭವಿಸಿದ ಕೂಡಲೇ ನೆರವಿಗೆ ಧಾವಿಸಿ ಬಂದ ಗ್ರಾಮಸ್ಥರು ಆಂಬ್ಯುಲೆನ್ಸ್ ಕರೆಸಿ ಚಿತ್ರದುರ್ಗಕ್ಕೆ ಚಿಕಿತ್ಸೆಗೆ ಕಳುಹಿಸಲು ನೆರವಾದರು. ರಕ್ಷಿತ್ನನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಕರೆದೊಯ್ಯಲಾಗಿದೆ.</p>.<p>ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>