<p><strong>ದಾವಣಗೆರೆ:</strong> ಇಂಧನ, ಚಿನ್ನ–ಬೆಳ್ಳಿಯೂ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ನೀತಿಗಳೇ ಕಾರಣ. ಅಡುಗೆ ಅನಿಲದ ಬೆಲೆ ಏರಿಕೆಯಿಂದ ಗ್ರಾಮೀಣ ಪ್ರದೇಶದ ಜನರು ಮತ್ತೆ ಸೌದೆ ಒಲೆಗೆ ಮರಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ₹ 1,356 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಅವರು ಮಾತನಾಡಿದರು.</p><p>‘ನರೇಂದ್ರ ಮೋದಿ 2014ರಲ್ಲಿ ಪ್ರಧಾನಿಯಾದಾಗ 10 ಗ್ರಾಂ ಚಿನ್ನದ ಬೆಲೆ ₹ 28,000 ಇತ್ತು. ಈಗ ಇದು ₹ 1 ಲಕ್ಷಕ್ಕೆ ಏರಿಕೆಯಾಗಿದೆ. ₹ 43,000 ಇದ್ದ 1 ಕೆ.ಜಿ. ಬೆಳ್ಳಿಯ ಬೆಲೆ ₹ 95 ಸಾವಿರಕ್ಕೆ ಹೆಚ್ಚಾಗಿದೆ. ₹ 416 ಇದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ₹ 875ಕ್ಕೆ ಏರಿಕೆಯಾಗಿದೆ. ಇದಕ್ಕೆ ಇದ್ದ ಸಬ್ಸಿಡಿ ರದ್ದುಪಡಿಸಿದ್ದರಿಂದ ಜನರು ಸೌಧೆ ಒಲೆಯತ್ತ ಹೊರಳಿದ್ದಾರೆ’ ಎಂದು ಹೇಳಿದರು.</p><p>‘ಕರ್ನಾಟಕಕ್ಕೆ ₹ 11,495 ಕೋಟಿ ನೀಡುವಂತೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಭದ್ರಾ ಮೇಲ್ದಂಡೆಗೆ ಘೋಷಣೆ ಮಾಡಿದ್ದ ₹ 5,300 ಕೋಟಿಯಲ್ಲಿ ಬಿಡಿಗಾಸು ಕೊಟ್ಟಿಲ್ಲ. ನಾನು ಯಾರ ವಿರುದ್ಧವೂ ಸುಳ್ಳು ಆರೋಪ ಮಾಡುವುದಿಲ್ಲ. ನಾನು ಹೇಳಿದ್ದು ಸುಳ್ಳಾದರೆ ಸಾರ್ವಜನಿಕ ಬದುಕಿನಲ್ಲಿ ಮುಂದುವರಿಯುವುದಿಲ್ಲ’ ಎಂದರು.</p><p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಜರಿದ್ದರು.</p> .<div><blockquote>ಪ್ರಧಾನಿ ನರೇಂದ್ರ ಮೋದಿ ಅವರು 56 ಇಂಚಿನ ಎದೆ ಹೊಂದಿರುವುದಾಗಿ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಇಂತಹ ಎದೆಯಲ್ಲಿ ಮನುಷ್ಯತ್ವ, ಕರುಣೆಯೂ ಇರಬೇಕು </blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಇಂಧನ, ಚಿನ್ನ–ಬೆಳ್ಳಿಯೂ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ನೀತಿಗಳೇ ಕಾರಣ. ಅಡುಗೆ ಅನಿಲದ ಬೆಲೆ ಏರಿಕೆಯಿಂದ ಗ್ರಾಮೀಣ ಪ್ರದೇಶದ ಜನರು ಮತ್ತೆ ಸೌದೆ ಒಲೆಗೆ ಮರಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ₹ 1,356 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಅವರು ಮಾತನಾಡಿದರು.</p><p>‘ನರೇಂದ್ರ ಮೋದಿ 2014ರಲ್ಲಿ ಪ್ರಧಾನಿಯಾದಾಗ 10 ಗ್ರಾಂ ಚಿನ್ನದ ಬೆಲೆ ₹ 28,000 ಇತ್ತು. ಈಗ ಇದು ₹ 1 ಲಕ್ಷಕ್ಕೆ ಏರಿಕೆಯಾಗಿದೆ. ₹ 43,000 ಇದ್ದ 1 ಕೆ.ಜಿ. ಬೆಳ್ಳಿಯ ಬೆಲೆ ₹ 95 ಸಾವಿರಕ್ಕೆ ಹೆಚ್ಚಾಗಿದೆ. ₹ 416 ಇದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ₹ 875ಕ್ಕೆ ಏರಿಕೆಯಾಗಿದೆ. ಇದಕ್ಕೆ ಇದ್ದ ಸಬ್ಸಿಡಿ ರದ್ದುಪಡಿಸಿದ್ದರಿಂದ ಜನರು ಸೌಧೆ ಒಲೆಯತ್ತ ಹೊರಳಿದ್ದಾರೆ’ ಎಂದು ಹೇಳಿದರು.</p><p>‘ಕರ್ನಾಟಕಕ್ಕೆ ₹ 11,495 ಕೋಟಿ ನೀಡುವಂತೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಭದ್ರಾ ಮೇಲ್ದಂಡೆಗೆ ಘೋಷಣೆ ಮಾಡಿದ್ದ ₹ 5,300 ಕೋಟಿಯಲ್ಲಿ ಬಿಡಿಗಾಸು ಕೊಟ್ಟಿಲ್ಲ. ನಾನು ಯಾರ ವಿರುದ್ಧವೂ ಸುಳ್ಳು ಆರೋಪ ಮಾಡುವುದಿಲ್ಲ. ನಾನು ಹೇಳಿದ್ದು ಸುಳ್ಳಾದರೆ ಸಾರ್ವಜನಿಕ ಬದುಕಿನಲ್ಲಿ ಮುಂದುವರಿಯುವುದಿಲ್ಲ’ ಎಂದರು.</p><p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಜರಿದ್ದರು.</p> .<div><blockquote>ಪ್ರಧಾನಿ ನರೇಂದ್ರ ಮೋದಿ ಅವರು 56 ಇಂಚಿನ ಎದೆ ಹೊಂದಿರುವುದಾಗಿ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಇಂತಹ ಎದೆಯಲ್ಲಿ ಮನುಷ್ಯತ್ವ, ಕರುಣೆಯೂ ಇರಬೇಕು </blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>