ಮೂರು ದಿನಗಳ ಹಿಂದೆ ಹೊನ್ನಾಳಿಗೆ ಭೇಟಿ ನೀಡಿದ್ದ ಸಿಐಡಿ ಡಿವೈಎಸ್ಪಿ ನಂದಕುಮಾರ್, ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಮತ್ತು ಸಿಬ್ಬಂದಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಿತ್ತು. ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಕೆಲವರನ್ನು ವಿಚಾರಣೆ ಮಾಡಿದ್ದಾರೆ. ಚಂದ್ರಶೇಖರ್ ಅವರ ಕಾರು ತುಂಗಾ ನಾಲೆಗೆ ಬಿದ್ದ ಸ್ಥಳ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಕಾರು ಹಾಗೂ ಕಾರಿನಲ್ಲಿದ್ದವರ ಮಾಹಿತಿಯನ್ನು ಕಲೆ ಹಾಕುತ್ತಿದೆ.