ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ‘ಬಿಜೆಪಿಗೆ ಒಂದು ಸಿದ್ದಾಂತ ಇದೆ. ಅದರಂತೆ ನಡೆದುಕೊಳ್ಳಬೇಕು. ಸರ್ಜಿಕಲ್ ಸ್ಟ್ರೈಕ್ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಏಕವಚನದಲ್ಲಿ ನಿಂದಿಸಿದ್ದರು. ಯಾರೇ ಆಗಲಿ ಯಾರ ಬಗ್ಗೆಯೂ ಏಕವಚನದಲ್ಲಿ ಮಾತನಾಡಬಾರದು. ಆರೋಗ್ಯಕರ ಟೀಕೆ ಟಿಪ್ಪಣಿ ಇರಬೇಕು’ ಎಂದು ಹೇಳಿದರು.