<p><strong>ದಾವಣಗೆರೆ</strong>: ಒಳಮೀಸಲಾತಿಯನ್ನು ಕಲ್ಪಿಸದೇ 56 ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಣಯವನ್ನು ವಿರೋಧಿಸಿ ಮಾರ್ಚ್ 6ರಂದು ದಾವಣಗೆರೆ ಬಂದ್ ನಡೆಸಲು ಮಾದಿಗ ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ. </p>.<p>ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಈ ಬಗ್ಗೆ ಭಾನುವಾರ ಸಭೆ ನಡೆಯಿತು. ಬಂದ್ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. </p>.<p>‘ಮಾದಿಗ ಸಮುದಾಯದ ಪ್ರತಿನಿಧಿಗಳು (ಶಾಸಕರು, ಸಚಿವರು) ಸದನದಲ್ಲಿ ಒಳ ಮೀಸಲಾತಿ ಪರ ಗಟ್ಟಿಯಾಗಿ ಮಾತನಾಡದಿರುವುದು ಸರಿಯಲ್ಲ. ಸರ್ಕಾರದ ಕಿವಿ ಹಿಂಡಿ, ಒಳಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಒತ್ತಾಯಿಸಬೇಕು’ ಎಂದು ಮುಖಂಡ ಆಲೂರು ನಿಂಗರಾಜು ಆಗ್ರಹಿಸಿದರು. </p>.<p>‘ಒಳ ಮೀಸಲಾತಿ ಮಾದಿಗ ಸಮುದಾಯದ ಹಕ್ಕು. ಶಿಕ್ಷಣ, ಉದ್ಯೋಗಕ್ಕಾಗಿ ಮಾದಿಗ ಸಮುದಾಯದವರು ಮೂರೂವರೆ ದಶಕದಿಂದ ನಿರಂತರ ಹೋರಾಟ ನಡೆಸಿದೆ. ಸುಪ್ರೀಂ ಕೋರ್ಟ್ನ ಆದೇಶದಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿ ಕಲ್ಪಿಸಿದ ನಂತರವೇ 56 ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಬೇಕು’ ಎಂದು ಒತ್ತಾಯಿಸಿದರು. </p>.<p>‘ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ದಲಿತ ಪರ, ಮಾದಿಗ ಪರ ಸಂಘಟನೆಗಳ ಮುಖಂಡರ ನೇತೃತ್ವದ ಹೋರಾಟವು ಪಕ್ಷಾತೀತವಾಗಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೋರಾಟವನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು. </p>.<p>‘ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಇಲ್ಲದೇ, ನೇಮಕಾತಿ ನಡೆಸಬಾರದು. ನಮ್ಮ ಸಮುದಾಯದ ಸಚಿವರು, ಶಾಸಕರು ಸರ್ಕಾರದ ಮೇಲೆ ಈ ಬಗ್ಗೆ ಒತ್ತಡ ಹೇರುವ ಮೂಲಕ ಒಳ ಮೀಸಲಾತಿ ಜಾರಿಗಾಗಿ ಶ್ರಮಿಸಬೇಕು’ ಎಂದು ಆಗ್ರಹಿಸಿದರು. </p>.<p>ಮಾದಿಗ ಸಮುದಾಯದ ನಾಯಕರಾದ ಪ್ರೊ.ಎಚ್.ವಿಶ್ವನಾಥ್, ಎಂ.ಹಾಲೇಶ್, ಎಚ್.ಸಿ.ಗುಡ್ಡಪ್ಪ, ಪಾಲಿಕೆ ಮಾಜಿ ಸದಸ್ಯ ಎಂ.ಹಾಲೇಶ್, ಕಡತಿ ಅಂಜಿನಪ್ಪ, ಎಚ್.ಮಲ್ಲೇಶ, ಉಚ್ಚಂಗಿ ಪ್ರಸಾದ, ರಾಘವೇಂದ್ರ ಕಡೇಮನಿ, ನಿಂಗರಾಜ ಚಿಕ್ಕನಹಳ್ಳಿ, ಕುಂದುವಾಡ ಮಂಜುನಾಥ, ಕೆಟಿಜೆ ನಗರ ಎಂ.ರವಿಕುಮಾರ, ಟಿ.ರವಿಕುಮಾರ ಸೇರಿದಂತೆ ಇನ್ನಿತರರು ಸಭೆಯಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಒಳಮೀಸಲಾತಿಯನ್ನು ಕಲ್ಪಿಸದೇ 56 ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಣಯವನ್ನು ವಿರೋಧಿಸಿ ಮಾರ್ಚ್ 6ರಂದು ದಾವಣಗೆರೆ ಬಂದ್ ನಡೆಸಲು ಮಾದಿಗ ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ. </p>.<p>ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಈ ಬಗ್ಗೆ ಭಾನುವಾರ ಸಭೆ ನಡೆಯಿತು. ಬಂದ್ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. </p>.<p>‘ಮಾದಿಗ ಸಮುದಾಯದ ಪ್ರತಿನಿಧಿಗಳು (ಶಾಸಕರು, ಸಚಿವರು) ಸದನದಲ್ಲಿ ಒಳ ಮೀಸಲಾತಿ ಪರ ಗಟ್ಟಿಯಾಗಿ ಮಾತನಾಡದಿರುವುದು ಸರಿಯಲ್ಲ. ಸರ್ಕಾರದ ಕಿವಿ ಹಿಂಡಿ, ಒಳಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಒತ್ತಾಯಿಸಬೇಕು’ ಎಂದು ಮುಖಂಡ ಆಲೂರು ನಿಂಗರಾಜು ಆಗ್ರಹಿಸಿದರು. </p>.<p>‘ಒಳ ಮೀಸಲಾತಿ ಮಾದಿಗ ಸಮುದಾಯದ ಹಕ್ಕು. ಶಿಕ್ಷಣ, ಉದ್ಯೋಗಕ್ಕಾಗಿ ಮಾದಿಗ ಸಮುದಾಯದವರು ಮೂರೂವರೆ ದಶಕದಿಂದ ನಿರಂತರ ಹೋರಾಟ ನಡೆಸಿದೆ. ಸುಪ್ರೀಂ ಕೋರ್ಟ್ನ ಆದೇಶದಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿ ಕಲ್ಪಿಸಿದ ನಂತರವೇ 56 ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಬೇಕು’ ಎಂದು ಒತ್ತಾಯಿಸಿದರು. </p>.<p>‘ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ದಲಿತ ಪರ, ಮಾದಿಗ ಪರ ಸಂಘಟನೆಗಳ ಮುಖಂಡರ ನೇತೃತ್ವದ ಹೋರಾಟವು ಪಕ್ಷಾತೀತವಾಗಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹೋರಾಟವನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು. </p>.<p>‘ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಇಲ್ಲದೇ, ನೇಮಕಾತಿ ನಡೆಸಬಾರದು. ನಮ್ಮ ಸಮುದಾಯದ ಸಚಿವರು, ಶಾಸಕರು ಸರ್ಕಾರದ ಮೇಲೆ ಈ ಬಗ್ಗೆ ಒತ್ತಡ ಹೇರುವ ಮೂಲಕ ಒಳ ಮೀಸಲಾತಿ ಜಾರಿಗಾಗಿ ಶ್ರಮಿಸಬೇಕು’ ಎಂದು ಆಗ್ರಹಿಸಿದರು. </p>.<p>ಮಾದಿಗ ಸಮುದಾಯದ ನಾಯಕರಾದ ಪ್ರೊ.ಎಚ್.ವಿಶ್ವನಾಥ್, ಎಂ.ಹಾಲೇಶ್, ಎಚ್.ಸಿ.ಗುಡ್ಡಪ್ಪ, ಪಾಲಿಕೆ ಮಾಜಿ ಸದಸ್ಯ ಎಂ.ಹಾಲೇಶ್, ಕಡತಿ ಅಂಜಿನಪ್ಪ, ಎಚ್.ಮಲ್ಲೇಶ, ಉಚ್ಚಂಗಿ ಪ್ರಸಾದ, ರಾಘವೇಂದ್ರ ಕಡೇಮನಿ, ನಿಂಗರಾಜ ಚಿಕ್ಕನಹಳ್ಳಿ, ಕುಂದುವಾಡ ಮಂಜುನಾಥ, ಕೆಟಿಜೆ ನಗರ ಎಂ.ರವಿಕುಮಾರ, ಟಿ.ರವಿಕುಮಾರ ಸೇರಿದಂತೆ ಇನ್ನಿತರರು ಸಭೆಯಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>